ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿಗಳ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತನಾಡಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ರೇವಣ್ಣ, ಈಗ ನಮ್ಮ ಬಳಿ 32 ಮತಗಳಿವೆ.
2 ರಾಷ್ಟ್ರೀಯ ಪಕ್ಷಗಳಿವೆ. ಒಂದು ಕೋಮುವಾದಿ ಪಕ್ಷ. ಮತ್ತೊಂದು ಕೋಮುವಾದ ವಿರುದ್ಧವಾದ ಪಕ್ಷ. ನಾವು ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ. ನಮ್ಮ ಅಭ್ಯರ್ಥಿ ಬೆಂಬಲಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಲಾಗಿದೆ ಎಂದರು.
ಇತ್ತ ಕುಪೇಂದ್ರ ರೆಡ್ಡಿ ಕೂಡ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಭೇಟಿಗೂ ಅವಕಾಶ ಕೇಳಿದ್ದೇವೆ. ರಾಮಲಿಂಗಾ ರೆಡ್ಡಿ ಭೇಟಿಯಾಗಿ ಮಾತನಾಡಿದ್ದೇವೆ. ಆದರೆ ನಿನ್ನೆ ಕಾಂಗ್ರೆಸ್ 2ನೇ ಅಭ್ಯರ್ಥಿಯನ್ನು ಹಾಕಿದೆ. ಕೋಮುವಾದವನ್ನು ದೂರವಿಡಲು ಪ್ರಾದೇಶಿಕ ಪಕ್ಷ ಬೆಂಬಲಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
