Sunday, July 26, 2026
Sunday, July 26, 2026

ಕಾಂಗ್ರೆಸ್& ಜೆಡಿಎಸ್ ನಿಂದ ಹಣವಂತರಿಗೆ ಟಿಕೆಟ್- ಸದಾನಂದಗೌಡ

Date:

ಹಿಂದೆ ವಿಧಾನ ಪರಿಷತ್ ಗೆ ಹಣವಿದ್ದವರಿಗೆ ಮಾತ್ರ ಪ್ರವೇಶ ಸಿಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರತಿಯೊಂದು ಕ್ಷೇತ್ರಗಳಿಂದ ಪ್ರಬುದ್ಧರನ್ನು ನೇಮಕ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಹಣವಿದ್ದವರಿಗೆ ಮಾತ್ರ ಮೇಲ್ಮನೆಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಗುಡ್ಡಗಾಡಿನಲ್ಲಿ ವಾಸ ಮಾಡುವವರ ಬಗ್ಗೆ ಯಾರು ಧ್ವನಿ ಎತ್ತುವುದಿಲ್ಲ.
ಅಂತವರನ್ನು ಬಿಜೆಪಿ ಗುರುತಿಸಿ ಟಿಕೆಟ್ ನೀಡಿದೆ. ಇದು ಪಕ್ಷದ ಸಂಪ್ರದಾಯ. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್, ನಾಲ್ಕು ಜಿಲ್ಲೆಗಳ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಕಳೆದ ಬಾರಿ ಅಲ್ಪ‌ ಮತಗಳಿಂದ ಸೋಲಾಯಿತು.ಈ ಚುನಾವಣೆಯಲ್ಲಿ ನಮಗೆ ಯಾರು ಪ್ರತಿಸ್ಪರ್ಧಿಗಳೇ ಇಲ್ಲಾ ಎಂದು ಹೇಳಿದ್ದಾರೆ.

ಬಿಜೆಪಿಗೆ ಈ ಭಾರಿ ದೊಡ್ಡ ರೀತಿಯಲ್ಲಿ ಜನ ಬೆಂಬಲವಿದೆ. ಬಿಜೆಪಿ ಅಭ್ಯರ್ಥಿ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಾರೆ. ಮೈಸೂರಿನಲ್ಲಿ ಈ ಭಾರಿ ಸಂಘನಾತ್ಮಕ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಗೆದ್ದೆ ಗೆಲ್ಲುತ್ತೇವೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಟ್ವೀಟ್ ಮಾಡಿ ಸುಸ್ತಾಗಿದೆ. ಇಂದಿನಿಂದ ಕುಮಾರಸ್ವಾಮಿ ಅವರ ವಿರುದ್ಧ ವಾರ್ ಶುರುವಾಗಿದೆ. ಕಾಂಗ್ರೆಸ್ ಅಳಿವಿನ ಅಂಚಿನಲ್ಲಿದೆ. ಅವರ ಟ್ವೀಟ್ ಗೆ ಉತ್ತರ ಕೊಡದೇ ಇರುವುದೇ ಲೇಸು. ಟ್ವೀಟ್ ಮಾಡುವುದೇ ಅವರಿಗೆ ಅಭ್ಯಾಸವಾಗಿದೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.

Shivamogga News ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು,...

Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.

Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ...

Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ...

World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ‌ಪರಿಸರ

World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ...