Monday, December 15, 2025
Monday, December 15, 2025

ರಾಜ್ಯಕ್ಕೆ ಜಿಎಸ್ ಟಿ ಪಾಲು ₹ 8,633 ಕೋಟಿ ಬಿಡುಗಡೆ

Date:

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬಾಕಿ ಉಳಿಸಿಕೊಂಡಿರುವ ಸರಕು ಹಾಗೂ ಸೇವಾ ತೆರಿಗೆ ಮೊತ್ತದಲ್ಲಿ 8,633 ಕೋಟಿ ರೂಪಾಯಿ ಮಂಜೂರು ಮಾಡಿದೆ.

ಕರ್ನಾಟಕವೂ ಸೇರಿದಂತೆ 21 ರಾಜ್ಯಗಳಿಗೆ ನೀಡಬೇಕಾದ ಸರಕು ಹಾಗೂ ಸೇವಾ ತೆರಿಗೆ 86,912 ಕೋಟಿ ರೂಪಾಯಿಗಳನ್ನು ಕೇಂದ್ರ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಪಾಲು 8633 ಕೋಟಿ ರೂಪಾಯಿ ಸೇರಿದೆ.

ಕೇಂದ್ರ ಸರ್ಕಾರವು ರಾಜ್ಯಕ್ಕೆ 2022ರ ಮೇ 31ರ ವರೆಗಿನ 8,633 ಕೋಟಿ ರೂಪಾಯಿ ಜಿಎಸ್‍ಟಿ ಪರಿಹಾರ ಮಂಜೂರು ಮಾಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವರಾಗಿ ನಿರ್ಮಲಾ ಸೀತಾರಾಮನ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರವು ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ. ಜಿಎಸ್‍ಟಿ ಪರಿಹಾರ ನೀಡಿದೆ. ಸುಭಿಕ್ಷ ಆರ್ಥಿಕತೆಯತ್ತ ಇದೊಂದು ಮಹತ್ವದ ಹೆಜ್ಜೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ರಾಜ್ಯಗಳು ತಮ್ಮ ಸಂಪನ್ಮೂಲಗಳನ್ನು ನಿರ್ವಹಿಸುವುದಕ್ಕೆ ನೆರವಾಗಲು ಹಾಗೂ ತಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಬಂಡವಾಳದ ಮೇಲಿನ ವೆಚ್ಚವನ್ನು ಈ ಹಣಕಾಸು ವರ್ಷದಲ್ಲಿ ಯಶಸ್ವಿಯಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯಗಳ ಸಂರಕ್ಷಿತ ಆದಾಯವು ಶೇ.14ರಷ್ಟು ಸಂಯೋಜಿತ ಬೆಳವಣಿಗೆಯಲ್ಲಿ ಬೆಳೆಯುತ್ತಿದೆ. ಆದರೆ ಸೆಸ್ ಸಂಗ್ರಹವು ಅದೇ ಅನುಪಾತದಲ್ಲಿ ಹೆಚ್ಚಾಗದ ಕಾರಣ, ಕೊರೋನಾ ರಕ್ಷಿತ ಆದಾಯ ಮತ್ತು ಸೆಸ್ ಸಂಗ್ರಹದಲ್ಲಿನ ಕಡಿತ ಸೇರಿದಂತೆ ನಿಜವಾದ ಆದಾಯದ ಸ್ವೀಕೃತಿಯ ನಡುವಿನ ಅಂತರ ಮತ್ತಷ್ಟು ಹೆಚ್ಚಿದೆ ಎಂದು ಸರ್ಕಾರ ಹೇಳಿದೆ.

ಕಳೆದ 2017ರ ಜುಲೈ 1ರಂದು ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ನೀತಿಯನ್ನು ಪರಿಚಯಿಸಲಾಯಿತು. 5 ವರ್ಷಗಳ ಅವಧಿ ಕಾಯ್ದೆ, 2017ರ ನಿಬಂಧನೆಗಳ ಪ್ರಕಾರ ಅನುಷ್ಠಾನದ ಖಾತೆಯಲ್ಲಿ ಉಂಟಾಗುವ ಯಾವುದೇ ಆದಾಯದ ನಷ್ಟಕ್ಕೆ ಪರಿಹಾರಕ್ಕಾಗಿ ರಾಜ್ಯಗಳಿಗೆ ಭರವಸೆ ನೀಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...