Saturday, December 13, 2025
Saturday, December 13, 2025

ಪಠ್ಯ ವಾಪ್ಸಿ ಗೆ ಮುಂದಾಗಿರುವ ಲೇಖಕರೊಂದಿಗೆ ಮಾತುಕತೆ – ಬೊಮ್ಮಾಯಿ

Date:

ಪಠ್ಯ ಪುಸ್ತಕಗಳಿಂದ ತಮ್ಮ ಪಾಠವನ್ನು ಪ್ರಕಟಿಸುವುದು ಬೇಡ. ಈಗಾಗಲೇ ನೀಡಿರುವ ಅನುಮತಿಯನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಪತ್ರ ಬರೆದಿರುವ ಸಾಹಿತಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಮತ್ತು ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ವರದಿ ದೊರೆಯಲಿದೆ. ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ , ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...