Saturday, June 6, 2026
Saturday, June 6, 2026

ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರ ಅಮಾನತು

Date:

ಶಾಲಾ-ಕಾಲೇಜು ಆವರಣದಲ್ಲಿ ವಸ್ತ್ರ ಸಂಹಿತೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು.

ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದು, ಶಾಲಾ-ಕಾಲೇಜು ಆವರಣದಲ್ಲಿ ಧಾರ್ಮಿಕ ಉಡುಪು ಧರಿಸಿ ಬರೋದಂತೆ ಖಡಕ್ ಆದೇಶದಲ್ಲಿ ಸೂಚಿಸಿತ್ತು.

ಆದರೆ, ಈ ನಿಯಮವನ್ನು ಪದೇ ಪದೇ ಮೀರಿ, ಹಿಜಾಬ್ ಧರಿಸಿಯೇ ಬಂದಂತ 6 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತಗೊಳಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿಗೆ, ಕೋರ್ಟ್ ಆದೇಶವಿದೆ. ಹಿಜಾಬ್ ತೆಗೆದಿರಿಸಿ ಕಾಲೇಜು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಸೂಚಿಸಿದ್ದರು.

ಆದರೆ ಆ 6 ವಿದ್ಯಾರ್ಥಿನಿಯರು ಮಾತ್ರ ಕೋರ್ಟ್ ಆದೇಶ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಸೂಚನೆಗೆ ಡೋಂಟ್ ಕೇರ್ ಎಂಬುದಾಗಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸುತ್ತಿದ್ದರು.

ಈ ಹಿನ್ನಲೆಯಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಸಭೆ ನಡೆಸಿ, ಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶವನ್ನು ಧಿಕ್ಕರಿಸಿ, ತರಗತಿಗೆ ಹಿಜಾಬ್ ಧರಿಸಿಯೇ ಬರುತ್ತಿರುವಂತ ವಿದ್ಯಾರ್ಥನಿಯಗಳನ್ನು ಕಾಲೇಜಿನಿಂದ ಅಮಾನತುಗೊಳಿಸಿರುವ ತೀರ್ಮಾನವನ್ನು ಕೈಗೊಂಡಿದ್ದಾರೆ.

ಹೀಗಾಗಿ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತ 6 ವಿದ್ಯಾರ್ಥಿನಿಯರನ್ನು ಉಪ್ಪನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...