Tuesday, February 10, 2026
Tuesday, February 10, 2026

ಕೇಂದ್ರದಿಂದ ಗ್ರಾಹಕರಿಗೆ ಬರೆ ಗೃಹಬಳಕೆ ಸಿಲಿಂಡರ್ ಗಳಿಗೆ ಸಹಾಯಧನ ಸ್ಟಾಪ್

Date:

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಆಘಾತ ವಿಷಯವನ್ನು ತಿಳಿಸಿದೆ. ಅದೇನು ಅಂದರೆ, ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ.

ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೊರೋನಾ ಆರಂಭ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ನು ಮುಂದೆ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂಪಾಯಿ ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ಸಿಗಲಿದೆ.

ಈ ಮುಂಚೆ ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್‌ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್‌ ಖರೀದಿ ಮಾಡಿದ ನಂತರ ಬ್ಯಾಂಕ್‌ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೊರೋನಾ ನಂತರ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಮಾಜಿ ‘ ಸಿಎಂ’ ಕೆಂಗಲ್ ಹನುಮಂತಯ್ಯನವರ ಜಯಂತಿ. ಪುಷ್ಪನಮನ ಸಲ್ಲಿಸಿದ ಸಿದ್ಧರಾಮಯ್ಯ

CM Siddharamaiah ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ...

Mahashivratri ಮಹಾ ಶಿವರಾತ್ರಿ ಪ್ರಯುಕ್ತ ಶಿವಮೊಗ್ಗದ ಶಿವಾಲಯದಲ್ಲಿ”ಕಾಶಿ ವಿಶ್ವನಾಥ ದರ್ಶನ”

Mahashivratri ಮಹಾಶಿವರಾತ್ರಿ ಪ್ರಯುಕ್ತ ನಗರದ ಸವಳಂಗ ರಸ್ತೆಯಲ್ಲಿರುವ ನೇಮೋಜಿರಾವ್ ಬಡಾವಣೆಯ ಶಿವಾಲಯದಲ್ಲಿ...