ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಆಘಾತ ವಿಷಯವನ್ನು ತಿಳಿಸಿದೆ. ಅದೇನು ಅಂದರೆ, ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ.
ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೊರೋನಾ ಆರಂಭ ದಿನದಿಂದ ಎಲ್ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ನು ಮುಂದೆ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1006 ರೂಪಾಯಿ ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ಸಿಗಲಿದೆ.
ಈ ಮುಂಚೆ ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್ ಖರೀದಿ ಮಾಡಿದ ನಂತರ ಬ್ಯಾಂಕ್ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೊರೋನಾ ನಂತರ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.