Monday, July 27, 2026
Monday, July 27, 2026

ಸಾಹಿತಿಗಳ ಮನವಿಗೆ ಬೆಲೆಯಿಲ್ಲ: ದೇವನೂರು ವಿಷಾದ

Date:

ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಭಿನ್ನಾಭಿಪ್ರಾಯಗಳನ್ನು ಟೂಲ್ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ತುಂಬಾ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದೆ ಅವರು 10 ನೇ ತರಗತಿಯಲ್ಲಿ ಸೇರಿಸಿರುವ ತಮ್ಮ ಪಠ್ಯವನ್ನು ಹಿಂತೆಗೆದುಕೊಳ್ಳಬೇಕು ಎಂದು ಹೇಳಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಆದರೆ ಸರ್ಕಾರ ಇದಕ್ಕೆ ಸ್ಪಂದಿಸದೇ ತನ್ನ ನಡೆಯನ್ನು ಸಮರ್ಥಿಸಿಕೊಂಡಿರುವ ಬೆನ್ನಲ್ಲೇ ದೇವನೂರು ಮಹದೇವ ಅವರು ಈಗ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರಿಗೆ ಮತ್ತೊಮ್ಮೆ ಪತ್ರ ಬರೆದು ಇದನ್ನು ದಯವಿಟ್ಟು ಮುಂದುವರೆಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...