Tuesday, February 10, 2026
Tuesday, February 10, 2026

ರೈಲ್ವೆ ಪ್ರಯಾಣದಲ್ಲಿ ಬೇಕಾಬಿಟ್ಟಿ ಲಗೇಜು ಒಯ್ಯುವಂತಿಲ್ಲ

Date:

ರೈಲುಗಳಲ್ಲಿ ಪ್ರಯಾಣಿಸುವ ಜನರು ಹೆಚ್ಚುವರಿ ಲಗೇಜ್ ಸಾಗಿಸುತ್ತಾರೆ. ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ಕೆಲವು ತೊಂದರೆಗಳು ಎದುರಾದ ಪರಿಣಾಮ ರೈಲ್ವೆ ಸಚಿವಾಲಯವು ಹೊಸ ನಿಯಮಗಳನ್ನು ಪ್ರಕಟಿಸಿದೆ.

ರೈಲಿನಲ್ಲಿ ಪ್ರಯಾಣಿಸುವಾಗ ಸಾಮಾನು ಸರಂಜಾಮು ಕೊಂಡೊಯ್ಯಲು ಮಿತಿ ಇದ್ದರೂ ಸಹ ಹೆಚ್ಚಿನ ಪ್ರಯಾಣಿಕರು ಅತಿ ಹೆಚ್ಚು ಲಗೇಜ್‌ನೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇದು ಇತರ ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಚೈನ್ ಎಳೆಯುವ ಘಟನೆಗಳು ಗಣನೀಯವಾಗಿ ಏರಿಕೆಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗುತ್ತಿರುವುದರಿಂದ ಪ್ರಯಾಣಿಸುವಾಗ ಹೆಚ್ಚುವರಿ ಲಗೇಜ್ ಅನ್ನು ಸಾಗಿಸುವ ಬಗ್ಗೆ ರೈಲ್ವೆ ಆಡಳಿತವು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ.

ರೈಲ್ವೆ ಯಾವಾಗಲೂ ದೂರದ ಪ್ರಯಾಣಿಕರಿಗೆ ವಿಶೇಷ ಆಯ್ಕೆಯಾಗಿದೆ. ಏಕೆಂದರೆ, ದೇಶದಲ್ಲಿ ಪ್ರಯಾಣಿಕರು ವಿಮಾನಕ್ಕಿಂತ ರೈಲಿನಲ್ಲಿ ಪ್ರಯಾಣದ ಸಮಯದಲ್ಲಿ ಹೆಚ್ಚು ಲಗೇಜ್‌ನೊಂದಿಗೆ ಪ್ರಯಾಣಿಸಬಹುದು. ಆದರೆ, ಈಗ ಇದು ರೈಲ್ವೆ ಹಾಗೂ ಸಹ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ರೈಲ್ವೇಯ ಈಗಿರುವ ನಿಯಮಗಳ ಪ್ರಕಾರ, ರೈಲಿನ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರು 40 ರಿಂದ 70 ಕೆಜಿಯಷ್ಟು ಲಗೇಜ್ ಅನ್ನು ಮಾತ್ರ ಸಾಗಿಸಬಹುದು. ವಾಸ್ತವವಾಗಿ, ರೈಲ್ವೇಯ ಕೋಚ್‌ಗೆ ಅನುಗುಣವಾಗಿ ಲಗೇಜ್‌ನ ತೂಕವು ವಿಭಿನ್ನವಾಗಿರುತ್ತದೆ. ಸ್ಲೀಪರ್, ಎಸಿ ಚೇರ್ ಕಾರ್ ಮತ್ತು ಎಸಿ 3 ಟೈಯರ್ ಕೋಚ್‌ಗಳಲ್ಲಿ ಪ್ರಯಾಣಿಕರು 40 ಕೆಜಿ ವರೆಗೆ ಸಾಗಿಸಬಹುದು. 2ನೇ ಎಸಿ ಕೋಚ್‌ಗಳಲ್ಲಿ ಪ್ರಯಾಣಿಕರು 50 ಕೆಜಿ ಮತ್ತು 1ನೇ ಎಸಿ ದರ್ಜೆಯ ಪ್ರಯಾಣಿಕರು 70 ಕೆಜಿ ವರೆಗೆ ಸಾಗಿಸಬಹುದು. ಸಾಮಾನ್ಯ ವರ್ಗದಲ್ಲಿ ಈ ಮಿತಿ ಕೇವಲ 35 ಕೆ.ಜಿ.ವರೆಗೆ ಇರಲಿದೆ.

ಯಾರಾದರೂ ಹೆಚ್ಚು ಲಗೇಜ್‌ನೊಂದಿಗೆ ಪ್ರಯಾಣಿಸುತ್ತಿರುವುದು ಕಂಡುಬಂದರೆ, ಪ್ರಯಾಣದ ದೂರಕ್ಕೆ ಅನುಗುಣವಾಗಿ ವ್ಯತ್ಯಾಸವಾಗುವ ದಂಡದೊಂದಿಗೆ ಹೆಚ್ಚುವರಿ ಲಗೇಜ್‌ಗೆ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ರೈಲ್ವೇ ಸಚಿವಾಲಯ ಎಚ್ಚರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಮಾಜಿ ‘ ಸಿಎಂ’ ಕೆಂಗಲ್ ಹನುಮಂತಯ್ಯನವರ ಜಯಂತಿ. ಪುಷ್ಪನಮನ ಸಲ್ಲಿಸಿದ ಸಿದ್ಧರಾಮಯ್ಯ

CM Siddharamaiah ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ...

Mahashivratri ಮಹಾ ಶಿವರಾತ್ರಿ ಪ್ರಯುಕ್ತ ಶಿವಮೊಗ್ಗದ ಶಿವಾಲಯದಲ್ಲಿ”ಕಾಶಿ ವಿಶ್ವನಾಥ ದರ್ಶನ”

Mahashivratri ಮಹಾಶಿವರಾತ್ರಿ ಪ್ರಯುಕ್ತ ನಗರದ ಸವಳಂಗ ರಸ್ತೆಯಲ್ಲಿರುವ ನೇಮೋಜಿರಾವ್ ಬಡಾವಣೆಯ ಶಿವಾಲಯದಲ್ಲಿ...