Tuesday, December 16, 2025
Tuesday, December 16, 2025

ರೈಲ್ವೆ ಪ್ರಯಾಣದಲ್ಲಿ ಬೇಕಾಬಿಟ್ಟಿ ಲಗೇಜು ಒಯ್ಯುವಂತಿಲ್ಲ

Date:

ರೈಲುಗಳಲ್ಲಿ ಪ್ರಯಾಣಿಸುವ ಜನರು ಹೆಚ್ಚುವರಿ ಲಗೇಜ್ ಸಾಗಿಸುತ್ತಾರೆ. ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ಕೆಲವು ತೊಂದರೆಗಳು ಎದುರಾದ ಪರಿಣಾಮ ರೈಲ್ವೆ ಸಚಿವಾಲಯವು ಹೊಸ ನಿಯಮಗಳನ್ನು ಪ್ರಕಟಿಸಿದೆ.

ರೈಲಿನಲ್ಲಿ ಪ್ರಯಾಣಿಸುವಾಗ ಸಾಮಾನು ಸರಂಜಾಮು ಕೊಂಡೊಯ್ಯಲು ಮಿತಿ ಇದ್ದರೂ ಸಹ ಹೆಚ್ಚಿನ ಪ್ರಯಾಣಿಕರು ಅತಿ ಹೆಚ್ಚು ಲಗೇಜ್‌ನೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇದು ಇತರ ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಚೈನ್ ಎಳೆಯುವ ಘಟನೆಗಳು ಗಣನೀಯವಾಗಿ ಏರಿಕೆಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗುತ್ತಿರುವುದರಿಂದ ಪ್ರಯಾಣಿಸುವಾಗ ಹೆಚ್ಚುವರಿ ಲಗೇಜ್ ಅನ್ನು ಸಾಗಿಸುವ ಬಗ್ಗೆ ರೈಲ್ವೆ ಆಡಳಿತವು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ.

ರೈಲ್ವೆ ಯಾವಾಗಲೂ ದೂರದ ಪ್ರಯಾಣಿಕರಿಗೆ ವಿಶೇಷ ಆಯ್ಕೆಯಾಗಿದೆ. ಏಕೆಂದರೆ, ದೇಶದಲ್ಲಿ ಪ್ರಯಾಣಿಕರು ವಿಮಾನಕ್ಕಿಂತ ರೈಲಿನಲ್ಲಿ ಪ್ರಯಾಣದ ಸಮಯದಲ್ಲಿ ಹೆಚ್ಚು ಲಗೇಜ್‌ನೊಂದಿಗೆ ಪ್ರಯಾಣಿಸಬಹುದು. ಆದರೆ, ಈಗ ಇದು ರೈಲ್ವೆ ಹಾಗೂ ಸಹ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ರೈಲ್ವೇಯ ಈಗಿರುವ ನಿಯಮಗಳ ಪ್ರಕಾರ, ರೈಲಿನ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರು 40 ರಿಂದ 70 ಕೆಜಿಯಷ್ಟು ಲಗೇಜ್ ಅನ್ನು ಮಾತ್ರ ಸಾಗಿಸಬಹುದು. ವಾಸ್ತವವಾಗಿ, ರೈಲ್ವೇಯ ಕೋಚ್‌ಗೆ ಅನುಗುಣವಾಗಿ ಲಗೇಜ್‌ನ ತೂಕವು ವಿಭಿನ್ನವಾಗಿರುತ್ತದೆ. ಸ್ಲೀಪರ್, ಎಸಿ ಚೇರ್ ಕಾರ್ ಮತ್ತು ಎಸಿ 3 ಟೈಯರ್ ಕೋಚ್‌ಗಳಲ್ಲಿ ಪ್ರಯಾಣಿಕರು 40 ಕೆಜಿ ವರೆಗೆ ಸಾಗಿಸಬಹುದು. 2ನೇ ಎಸಿ ಕೋಚ್‌ಗಳಲ್ಲಿ ಪ್ರಯಾಣಿಕರು 50 ಕೆಜಿ ಮತ್ತು 1ನೇ ಎಸಿ ದರ್ಜೆಯ ಪ್ರಯಾಣಿಕರು 70 ಕೆಜಿ ವರೆಗೆ ಸಾಗಿಸಬಹುದು. ಸಾಮಾನ್ಯ ವರ್ಗದಲ್ಲಿ ಈ ಮಿತಿ ಕೇವಲ 35 ಕೆ.ಜಿ.ವರೆಗೆ ಇರಲಿದೆ.

ಯಾರಾದರೂ ಹೆಚ್ಚು ಲಗೇಜ್‌ನೊಂದಿಗೆ ಪ್ರಯಾಣಿಸುತ್ತಿರುವುದು ಕಂಡುಬಂದರೆ, ಪ್ರಯಾಣದ ದೂರಕ್ಕೆ ಅನುಗುಣವಾಗಿ ವ್ಯತ್ಯಾಸವಾಗುವ ದಂಡದೊಂದಿಗೆ ಹೆಚ್ಚುವರಿ ಲಗೇಜ್‌ಗೆ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ರೈಲ್ವೇ ಸಚಿವಾಲಯ ಎಚ್ಚರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...