ದೇಶದಲ್ಲಿ ಕೊರೋನಾ ಮಹಾಮಾರಿ ಜೂನ್ ತಿಂಗಳಿಗೆ ಮತ್ತೆ ಬರಲಿದೆ ಎಂಬ ಲೆಕ್ಕಾಚಾರ, ಎಚ್ಚರಿಕೆಗಳ ಮಧ್ಯೆ ಮಹಾರಾಷ್ಟ್ರದಲ್ಲಿ ಅಪಾಯಕಾರಿ ಸೋಂಕು ಪತ್ತೆಯಾಗಿದೆ. ಒಂದೂವರೆ ತಿಂಗಳ ನಂತರ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
626 ರಿಂದ 4,500ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಮುಂಬೈ, ಪುಣೆಯಲ್ಲಿ ಶೇ.97ರಷ್ಟು ಸಕ್ರಿಯ ಪ್ರಕರಣಗಳಿವೆ.
ಮುಂಬೈ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತಾಗಿ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಹೈಅಲರ್ಟ್ ಘೋಷಿಸಿದ್ದಾರೆ.
ಕೊರೋನಾ ಸ್ಥಿತಿಗತಿಗಳು, ವೈದ್ಯಕೀಯ ಸೇವೆಗಳ ಉಪಲಭ್ಯತೆ ಬಗ್ಗೆ ಚರ್ಚಿಸಿದ ಉದ್ಧವ್ ಠಾಕ್ರೆ, ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ, ಆಕ್ಸಿಜನ್ ಪೂರೈಕೆ, ಔಷಧಗಳ ದಾಸ್ತಾನು ಕಡಿಮೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಜ್ವರ, ಶೀತ, ಕೆಮ್ಮು ಅಥವಾ ಎದೆನೋವು ಕಂಡು ಬಂದರೆ ಕೊರೋನಾ ಪರೀಕ್ಷೆ ಮಾಡಿಸಿ ಎಂದು ರಾಜ್ಯದ ಜನರಿಗೆ ಸಂದೇಶ ನೀಡಿದ್ದಾರೆ. ಕರ್ನಾಟಕದಲ್ಲೂ ಕೊರೊನಾ ಏರಿಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 297 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲೇ 276 ಮಂದಿಗೆ ಸೋಂಕು ಪತ್ತೆಯಾಗಿದೆ.