Sunday, December 14, 2025
Sunday, December 14, 2025

ಪಠ್ಯ ವಿವಾದ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Date:

ಶಿವಮೊಗ್ಗ ನಗರದಲ್ಲಿ ಎಲ್ಲಾ ಕನ್ನಡ ಪರ, ಪ್ರಗತಿಪರ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರ ಜೊತೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿದ, ಅಣ್ಣ ಬಸವಣ್ಣನವರ, ಅಂಬೇಡ್ಕರ್ ಅವರ ವಿರುದ್ಧ ವಿಕೃತ ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆದು ಅವಮಾನಿಸಿದ ವ್ಯಕ್ತಿ ನೇತೃತ್ವದಲ್ಲಿ ಪಠ್ಯ ಪುಸ್ತಕ ರಚನಾ ಸಮಿತಿ ರಚಿಸಿ ಅವರಿಂದಾದ ಪಠ್ಯ ಪುಸ್ತಕ ವಿರೂಪವನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸಲಾಯಿತು.

ಶಿವಮೊಗ್ಗದ ಕುವೆಂಪು ರಂಗಮಂದಿರದ ಮುಂಭಾಗದಲ್ಲಿರುವ ಕುವೆಂಪು ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಗೊಂಡಿತು. ನಂತರ ಬಸವೇಶ್ವರ ವೃತ್ತಕ್ಕೆ ತೆರಳಿ ಬಸವಣ್ಣನವರ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸಿ, ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಗೆ ಪುಷ್ಪ ನಮನ ಸಲ್ಲಿಸಿ ಶಿವಪ್ಪನಾಯಕ ಪ್ರತಿಮೆಬಳಿ ಸೇರಿದ್ದ ಎಲ್ಲರೊಂದಿಗೆ ಪಾದಯಾತ್ರೆ ಕೈಗೊಳ್ಳಲಾಯಿತು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು.

ಈ ಸಭೆಯನ್ನು ಉದ್ದೇಶಿಸಿ ವಿವಿಧ ಸಂಘಟನೆಗಳ ಕೆ. ಪಿ. ಶ್ರೀಪಾಲ್, ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ, ಸಾಹಿತಿಗಳು, ಚಿಂತಕರಾದ ಪ್ರೊ. ರಾಜೇಂದ್ರ ಚೆನ್ನಿ, ರೈತಸಂಘದ ಅಧ್ಯಕ್ಷ ಎಚ್. ಆರ್. ಬಸವರಾಜಪ್ಪ, ರೈತನಾಯಕ ಕೆ. ಟಿ. ಗಂಗಾಧರ, ಡಾ. ಶಾಂತಸುರೇಂದ್ರ, ಡಾ. ಭಾಗ್ಯಲಕ್ಷ್ಮಿ, ಅಕ್ಷತಾ ಹುಂಚದಕಟ್ಟೆ, ಎಂ. ಗುರುಮೂರ್ತಿ, ಮಹಾನಗರ ಪಾಲಿಕೆಯ ಸದಸ್ಯರಾದ ಬಿ. ಎ. ರಮೇಶ್ ಹೆಗಡೆ, ಅನನ್ಯ ಶಿವು ಸೇರಿದಂತೆ ಇನ್ನೂ ಮುಂತಾದವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...