Monday, May 25, 2026
Monday, May 25, 2026

ಪಠ್ಯ ವಿವಾದ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Date:

ಶಿವಮೊಗ್ಗ ನಗರದಲ್ಲಿ ಎಲ್ಲಾ ಕನ್ನಡ ಪರ, ಪ್ರಗತಿಪರ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರ ಜೊತೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿದ, ಅಣ್ಣ ಬಸವಣ್ಣನವರ, ಅಂಬೇಡ್ಕರ್ ಅವರ ವಿರುದ್ಧ ವಿಕೃತ ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆದು ಅವಮಾನಿಸಿದ ವ್ಯಕ್ತಿ ನೇತೃತ್ವದಲ್ಲಿ ಪಠ್ಯ ಪುಸ್ತಕ ರಚನಾ ಸಮಿತಿ ರಚಿಸಿ ಅವರಿಂದಾದ ಪಠ್ಯ ಪುಸ್ತಕ ವಿರೂಪವನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸಲಾಯಿತು.

ಶಿವಮೊಗ್ಗದ ಕುವೆಂಪು ರಂಗಮಂದಿರದ ಮುಂಭಾಗದಲ್ಲಿರುವ ಕುವೆಂಪು ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಗೊಂಡಿತು. ನಂತರ ಬಸವೇಶ್ವರ ವೃತ್ತಕ್ಕೆ ತೆರಳಿ ಬಸವಣ್ಣನವರ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸಿ, ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಗೆ ಪುಷ್ಪ ನಮನ ಸಲ್ಲಿಸಿ ಶಿವಪ್ಪನಾಯಕ ಪ್ರತಿಮೆಬಳಿ ಸೇರಿದ್ದ ಎಲ್ಲರೊಂದಿಗೆ ಪಾದಯಾತ್ರೆ ಕೈಗೊಳ್ಳಲಾಯಿತು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು.

ಈ ಸಭೆಯನ್ನು ಉದ್ದೇಶಿಸಿ ವಿವಿಧ ಸಂಘಟನೆಗಳ ಕೆ. ಪಿ. ಶ್ರೀಪಾಲ್, ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ, ಸಾಹಿತಿಗಳು, ಚಿಂತಕರಾದ ಪ್ರೊ. ರಾಜೇಂದ್ರ ಚೆನ್ನಿ, ರೈತಸಂಘದ ಅಧ್ಯಕ್ಷ ಎಚ್. ಆರ್. ಬಸವರಾಜಪ್ಪ, ರೈತನಾಯಕ ಕೆ. ಟಿ. ಗಂಗಾಧರ, ಡಾ. ಶಾಂತಸುರೇಂದ್ರ, ಡಾ. ಭಾಗ್ಯಲಕ್ಷ್ಮಿ, ಅಕ್ಷತಾ ಹುಂಚದಕಟ್ಟೆ, ಎಂ. ಗುರುಮೂರ್ತಿ, ಮಹಾನಗರ ಪಾಲಿಕೆಯ ಸದಸ್ಯರಾದ ಬಿ. ಎ. ರಮೇಶ್ ಹೆಗಡೆ, ಅನನ್ಯ ಶಿವು ಸೇರಿದಂತೆ ಇನ್ನೂ ಮುಂತಾದವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...