Monday, December 15, 2025
Monday, December 15, 2025

ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ

Date:

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮಾನ್ಸೂನ್ ನಿನ್ನೆ ಶುಕ್ರವಾರದಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ.ನಂತರ 5 ದಿನಗಳ ಕಾಲ ಈಶಾನ್ಯ ರಾಜ್ಯಗಳು ಸೇರಿದಂತೆ ಬಂಗಾಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳದಲ್ಲಿ ಜೂನ್ 8 ರ ಬೆಳಿಗ್ಗೆ ತನಕ ಕೂಚ್ ಬೆಹಾರ್, ಜಲ್ಪೈಗುರಿ, ಅಲಿಪುರ್ದೂರ್, ಡಾರ್ಜಿಲಿಂಗ್ ಹಾಗೂ ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 5 ದಿನಗಳ ಕಾಲ ಈಶಾನ್ಯ ರಾಜ್ಯಗಳ ಹವಾಮಾನದ ಮೇಲೆ ಪರಿಣಾಮ ಬೀರಲಿದೆ. ಬಂಗಾಳದ ಜಿಲ್ಲೆಗಳಲ್ಲಿ ಮಿಂಚು ಮತ್ತು ಲಘು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಶುಕ್ರವಾರ ತಿಳಿಸಿದೆ. ಆದ್ದರಿಂದ ಅಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಮೊದಲು, ಮುಂದಿನ 5 ದಿನಗಳಲ್ಲಿ ಕೇರಳ, ಕರಾವಳಿ ಕರ್ನಾಟಕ ಹಾಗೂ ಲಕ್ಷದ್ವೀಪದಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆ ಮತ್ತು ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರತ್ಯೇಕ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...