Sunday, August 2, 2026
Sunday, August 2, 2026

ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ

Date:

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮಾನ್ಸೂನ್ ನಿನ್ನೆ ಶುಕ್ರವಾರದಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ.ನಂತರ 5 ದಿನಗಳ ಕಾಲ ಈಶಾನ್ಯ ರಾಜ್ಯಗಳು ಸೇರಿದಂತೆ ಬಂಗಾಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳದಲ್ಲಿ ಜೂನ್ 8 ರ ಬೆಳಿಗ್ಗೆ ತನಕ ಕೂಚ್ ಬೆಹಾರ್, ಜಲ್ಪೈಗುರಿ, ಅಲಿಪುರ್ದೂರ್, ಡಾರ್ಜಿಲಿಂಗ್ ಹಾಗೂ ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 5 ದಿನಗಳ ಕಾಲ ಈಶಾನ್ಯ ರಾಜ್ಯಗಳ ಹವಾಮಾನದ ಮೇಲೆ ಪರಿಣಾಮ ಬೀರಲಿದೆ. ಬಂಗಾಳದ ಜಿಲ್ಲೆಗಳಲ್ಲಿ ಮಿಂಚು ಮತ್ತು ಲಘು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಶುಕ್ರವಾರ ತಿಳಿಸಿದೆ. ಆದ್ದರಿಂದ ಅಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಮೊದಲು, ಮುಂದಿನ 5 ದಿನಗಳಲ್ಲಿ ಕೇರಳ, ಕರಾವಳಿ ಕರ್ನಾಟಕ ಹಾಗೂ ಲಕ್ಷದ್ವೀಪದಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆ ಮತ್ತು ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರತ್ಯೇಕ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...