Thursday, June 18, 2026
Thursday, June 18, 2026

ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ

Date:

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮಾನ್ಸೂನ್ ನಿನ್ನೆ ಶುಕ್ರವಾರದಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ.ನಂತರ 5 ದಿನಗಳ ಕಾಲ ಈಶಾನ್ಯ ರಾಜ್ಯಗಳು ಸೇರಿದಂತೆ ಬಂಗಾಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳದಲ್ಲಿ ಜೂನ್ 8 ರ ಬೆಳಿಗ್ಗೆ ತನಕ ಕೂಚ್ ಬೆಹಾರ್, ಜಲ್ಪೈಗುರಿ, ಅಲಿಪುರ್ದೂರ್, ಡಾರ್ಜಿಲಿಂಗ್ ಹಾಗೂ ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 5 ದಿನಗಳ ಕಾಲ ಈಶಾನ್ಯ ರಾಜ್ಯಗಳ ಹವಾಮಾನದ ಮೇಲೆ ಪರಿಣಾಮ ಬೀರಲಿದೆ. ಬಂಗಾಳದ ಜಿಲ್ಲೆಗಳಲ್ಲಿ ಮಿಂಚು ಮತ್ತು ಲಘು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಡಿಶಾದ ಕರಾವಳಿ ಭಾಗದಲ್ಲಿ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಭಾಗದಲ್ಲಿ ಚಂಡಮಾರುತದ ಪರಿಚಲನೆ ಮತ್ತು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತದ ಕಡೆಗೆ ಬಲವಾದ ನೈಋತ್ಯ ಮಾರುತಗಳು ಬೀಸುತ್ತಿರುವ ಕಾರಣ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ನೈಋತ್ಯ ಮಾನ್ಸೂನ್ ಸಂಪೂರ್ಣ ಈಶಾನ್ಯ ರಾಜ್ಯಗಳು ಮತ್ತು ಉಪಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಶುಕ್ರವಾರ ತಿಳಿಸಿದೆ. ಆದ್ದರಿಂದ ಅಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಮೊದಲು, ಮುಂದಿನ 5 ದಿನಗಳಲ್ಲಿ ಕೇರಳ, ಕರಾವಳಿ ಕರ್ನಾಟಕ ಹಾಗೂ ಲಕ್ಷದ್ವೀಪದಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆ ಮತ್ತು ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರತ್ಯೇಕ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...