Friday, April 10, 2026
Friday, April 10, 2026

ರಾಜ್ಯಸಭೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಆಜಾದ್ ಹೆಸರಿಲ್ಲ

Date:

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಗೆ ಸ್ಥಾನ ನೀಡಿಲ್ಲ.

ರಾಜ್ಯಸಭಾ ಸ್ಥಾನದ ಟಿಕೆಟ್ ನಿರಾಕರಣೆಗೊಂಡಿದ್ದರಿಂದ ಪಕ್ಷದ ವಿರುದ್ಧ ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ. ಆದ್ದರಿಂದ, ಪಕ್ಷ ಸಂಘಟನೆಯಲ್ಲಿ ಯಾವುದೇ ರೀತಿಯ ಆಸಕ್ತಿ ತೋರಿಸುತ್ತಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.

ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲು ಪಕ್ಷದಿಂದ ಟಿಕೆಟ್​ ನಿರಾಕರಣೆಯಾಗುತ್ತಿದ್ದಂತೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಕೆಲಹೊತ್ತು ಗುಲಾಂ ನಬಿ ಆಜಾದ್​ ಜೊತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷೆ ನೀಡಿರುವ ಪಕ್ಷದಲ್ಲಿ 2ನೇ ಸ್ಥಾನವನ್ನು ಕೂಡ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಗುಲಾಂ ನಬಿ ಆಜಾದ್​ ಅವರಿಗೆ ದೂರವಾಣಿ ಕರೆ ಮಾಡಿರುವ ಸೋನಿಯಾ ಗಾಂಧಿ, ಪಕ್ಷಕ್ಕೆ ಸಂಬಂಧಿಸಿದ ಕೆಲವೊಂದು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ನಿಮಗೆ ಪಕ್ಷದಲ್ಲಿ 2ನೇ ಸ್ಥಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಆದರೆ, ಇದನ್ನು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಇದಕ್ಕೆ ನಿರಾಕರಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಜಸ್ಥಾನದಲ್ಲಿ ನಡೆದ ಚಿಂತನ್ ಶಿವಿರ್ ನಲ್ಲಿ ಗುಲಾಂ ನಬಿ ಆಜಾದ್ ಮತ್ತು ಅವರ ಬೆಂಬಲಿಗರು ಭಾಗಿಯಾಗಿರಲಿಲ್ಲ. ಆದ್ದರಿಂದ ಎಲ್ಲವೂ ಸರಿಯಾಗಿಲ್ಲ ಎಂಬುದು ಸ್ಪಷ್ಟವಾಗಿತ್ತು. ಇದರ ಬೆನ್ನಲ್ಲೇ ಅವರಿಗೆ ಟಿಕೆಟ್ ನಿರಾಕರಣೆಯಾಗಿದೆ. ಈ ಸಲದ ಕಾಂಗ್ರೆಸ್ ಪಟ್ಟಿಯಲ್ಲಿ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ವೀರಪ್ಪ ಮೊಯ್ಲಿ ಹೆಸರು ಇಲ್ಲ. ಇವರ ಬದಲಿಗೆ ಬೇರೆಯವರಿಗೆ ಕಾಂಗ್ರೆಸ್ ಅವಕಾಶ ಕೊಟ್ಟಿದೆ.

ಕಾಂಗ್ರೆಸ್​ನ ಜಿ -23 ಗುಂಪಿನ ಪ್ರಮುಖ ಸದಸ್ಯರಾಗಿರುವ ಗುಲಾಂ ನಬಿ ಆಜಾದ್​​ ಈಗ ಪಕ್ಷದ ವಿರುದ್ಧ ರೆಬೆಲ್ ಆಗಿದ್ದಾರೆ. ಮುಂದೆ ಯಾವ ರೀತಿಯ ನಿರ್ಧಾರ ತೆಗೆದು ಕೊಳ್ಳುತ್ತಾರೆ ಎಂಬುವುದು ಎಲ್ಲರಲ್ಲೂ ಕುತೂಹಲ ಮೂಡಿಸುವಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...