ರಾಜ್ಯದಲ್ಲಿ ಮತ್ತೆ ಕೊರೋನಾ ವೈರಸ್ ಅಬ್ಬರ ಶುರುವಾಗಿದೆ. ಕಳೆದ ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ.
ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ 4ನೇ ಭೀತಿ ಎದುರಾಗಿದೆ.
ಮುಂದಿನ 2-3 ವಾರಗಳು ನಿರ್ಣಾಯಕವಾಗಿದೆ. ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದೆ. ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ 1443 ಸೋಂಕಿತರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ 4ನೇ ಭೀತಿ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ತಜ್ಞರು ಎಚ್ಚರಿಕೆ ನೀಡಿದೆ. ಕೋವಿಡ್ ಲಸಿಕೆ ಪಡೆದಿದ್ದರೂ ಜನರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದೆ.
