Tuesday, December 9, 2025
Tuesday, December 9, 2025

ಒಡಿಶಾದಿಂದ ರಾಜ್ಯಸಭೆಗೆ ಮೂವರ ಅವಿರೋಧ ಆಯ್ಕೆ

Date:

ಒಡಿಶಾದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ನವೀನ್ ಪಟ್ನಾಯಕ್ ನೇೃತ್ವದ ಒಡಿಶಾ ಸರ್ಕಾರ ಸಂಪುಟ ಪುನಾರಚನೆಗೆ ನಿರ್ಧರಿಸಿದೆ. ಪರಿಣಾಮ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಒಡಿಶಾದ ಆಡಳಿತರೂಢ ಬಿಜು ಜನತಾದಳ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತ ಬ್ರಜ್‌ರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜಿ ಡಿ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ನವೀನ್ ಪಟ್ನಾಯಕ್ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೊರತು ಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ನಾಳೆ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆಲ ಸಚಿವರನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲು ನವೀನ್ ಪಟ್ನಾಯಕ್ ನಿರ್ದರಿಸಿದ್ದಾರೆ.

ಒಡಿಶಾ ವಿಧಾನಸಭೆ ಸಂಖ್ಯಾ ಬಲ 147. ಇದರಲ್ಲಿ ಆಡಳಿತರೂಢ ಬಿಜೆಡಿ 113 ಶಾಸಕರನ್ನು ಹೊಂದಿದೆ. ಇತ್ತ ಪ್ರತಿಪಕ್ಷ ಬಿಜೆಪಿ 22 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 9 ಶಾಸಕರನ್ನು ಹೊಂದಿದೆ.

ಬ್ರಜ್‌ರಾಜನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಡಿ ಅಭ್ಯರ್ಥಿ ಅಲಕಾ ಮೊಹಾಂತಿ 66,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ರಾಜಕರಾಣಿ ಕಿಶೋರ್ ಪಟೆಲ್ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಬಳಿಕ ನಡೆದ ಒಡಿಶಾ ಉಪ ಚುನಾವಣೆಗಳಲ್ಲಿ ಈ ಗೆಲುವು ಗರಿಷ್ಠ ಅಂತರದ ಗೆಲುವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...