Tuesday, May 12, 2026
Tuesday, May 12, 2026

ಒಡಿಶಾದಿಂದ ರಾಜ್ಯಸಭೆಗೆ ಮೂವರ ಅವಿರೋಧ ಆಯ್ಕೆ

Date:

ಒಡಿಶಾದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ನವೀನ್ ಪಟ್ನಾಯಕ್ ನೇೃತ್ವದ ಒಡಿಶಾ ಸರ್ಕಾರ ಸಂಪುಟ ಪುನಾರಚನೆಗೆ ನಿರ್ಧರಿಸಿದೆ. ಪರಿಣಾಮ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಒಡಿಶಾದ ಆಡಳಿತರೂಢ ಬಿಜು ಜನತಾದಳ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತ ಬ್ರಜ್‌ರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜಿ ಡಿ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ನವೀನ್ ಪಟ್ನಾಯಕ್ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೊರತು ಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ನಾಳೆ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆಲ ಸಚಿವರನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ. ಇನ್ನು ಹೊಸ ಮುಖಗಳಿಗೆ ಅವಕಾಶ ನೀಡಲು ನವೀನ್ ಪಟ್ನಾಯಕ್ ನಿರ್ದರಿಸಿದ್ದಾರೆ.

ಒಡಿಶಾ ವಿಧಾನಸಭೆ ಸಂಖ್ಯಾ ಬಲ 147. ಇದರಲ್ಲಿ ಆಡಳಿತರೂಢ ಬಿಜೆಡಿ 113 ಶಾಸಕರನ್ನು ಹೊಂದಿದೆ. ಇತ್ತ ಪ್ರತಿಪಕ್ಷ ಬಿಜೆಪಿ 22 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 9 ಶಾಸಕರನ್ನು ಹೊಂದಿದೆ.

ಬ್ರಜ್‌ರಾಜನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಡಿ ಅಭ್ಯರ್ಥಿ ಅಲಕಾ ಮೊಹಾಂತಿ 66,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ರಾಜಕರಾಣಿ ಕಿಶೋರ್ ಪಟೆಲ್ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಬಳಿಕ ನಡೆದ ಒಡಿಶಾ ಉಪ ಚುನಾವಣೆಗಳಲ್ಲಿ ಈ ಗೆಲುವು ಗರಿಷ್ಠ ಅಂತರದ ಗೆಲುವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...

Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪಿಸಲಿ :ಬಿ.ಗೋಪಿನಾಥ್

Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆಯಾಗಬೇಕು...