Friday, June 26, 2026
Friday, June 26, 2026

ವಿಶ್ವ ಪರಿಸರ ದಿನ ಮಣ್ಣು ಉಳಿಸಿ ಆಂದೋಲನದಲ್ಲಿ ಪ್ರಧಾನಿ

Date:

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಣ್ಣು ಉಳಿಸಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವ ಪರಿಸರ ದಿನದಂದು ಇಡೀ ವಿಶ್ವದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂದು ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಅಮೃತ ಕಾಲದಲ್ಲಿ ಹೊಸ ಸಂಕಲ್ಪಗಳನ್ನು ಕೈಗೊಳ್ಳುತ್ತಿದೆ. ಆದ್ದರಿಂದ, ಈ ರೀತಿಯ ಸಾರ್ವಜನಿಕ ಅಭಿಯಾನ ಬಹಳ ಮುಖ್ಯವಾಗುತ್ತದೆ. ಕಳೆದ 8 ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಯೋಜನೆಗಳು ಒಂದಲ್ಲ ಒಂದು ರೀತಿಯಲ್ಲಿ ಪರಿಸರವನ್ನು ಸಂರಕ್ಷಿಸುವ ಹಂಬಲವನ್ನು ಹೊಂದಿವೆ ಎಂಬ ತೃಪ್ತಿ ನನಗಿದೆ ಎಂದು ತಿಳಿಸಿದ್ದಾರೆ.

ಸ್ವಚ್ಛ ಭಾರತ್ ಮಿಷನ್, ತ್ಯಾಜ್ಯವನ್ನು ಸಂಪತ್ತಾಗಿಸುವ ಕಾರ್ಯಕ್ರಮಗಳು, ಅಮೃತ್ ಮಿಷನ್ ಅಡಿ ನಗರಗಳಲ್ಲಿ ಆಧುನಿಕ ಒಳಚರಂಡಿ ಸಂಸ್ಕರಣಾ ಘಟಕಗಳ ನಿರ್ಮಾಣ, ಸಿಂಗಲ್ ಯೂಸ್ ಪ್ಲಾಸ್ಟಿಕ್‌ಗಳನ್ನು ಬಳಸಿ ಪರಿಸರವನ್ನು ರಕ್ಷಿಸುವ ಭಾರತದ ಬಹು ಆಯಾಮಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...