Thursday, August 13, 2026
Thursday, August 13, 2026

ಪ್ರತೀ ತಿಂಗಳ 3 ನೇ ಶನಿವಾರ ವಿದ್ಯುತ್ ಅದಾಲತ್- ಸುನೀಲ್ ಕುಮಾರ್

Date:

ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಬೇಕೆಂದು ಇಂಧನ ಸಚಿವ ಸುನಿಲ್​ ಕುಮಾರ್​ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಆದೇಶಿಸಿರುವ ಅವರು, ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆ ಹಳ್ಳಿವರೆಗೆ ಭೇಟಿ ನೀಡಬೇಕು.

ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಅವರು ಆದೇಶ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್​ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡುವಂತೆ ಸಚಿವರು ತಿಳಿಸಿದ್ದಾರೆ.

ಸಹಾಯಕ ಕಾರ್ಯಪಾಲಕ ಇಂಜಿನಿಯರ್​ರಿಂದ ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳೂ ಅಭಿಯಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಆದ್ಯತೆ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ, ಪ್ರತಿ ಹಳ್ಳಿಗೆ ಪ್ರತಿ ಹಳ್ಳಿಗೆ ಅಭಿಯಾನ ವಿಸ್ತರಿಸಬೇಕು ಎಂದು ವಿವರಿಸಿದ್ದಾರೆ.

ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 energy@gpail.com ಇ-ಮೇಲ್​ ಮೂಲಕ ಸರ್ಕಾರಕ್ಕೆ ಕಳುಹಿಸಬೇಕೆಂದು ಆದೇಶ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...