Saturday, July 18, 2026
Saturday, July 18, 2026

ರಾಯಚೂರಿನಲ್ಲಿ ಕಲುಷಿತ ನೀರು ಸೇವನೆ: 3 ಸಾವು

Date:

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 3 ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನೀರಿನ ಮಾದರಿಯನ್ನು ಸಂಗ್ರಹಿಸಿ, ಲ್ಯಾಬ್ ಗೆ ಕಳುಹಿಸಲು ಸೂಚಿಸಲಾಗಿದೆ. ಅಧಿಕಾರಿಗಳ ಲೋಪ ದೋಷದ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರ ರೊಂದಿಗೆ ಈ ವಿಷಯವಾಗಿ ಮಾತನಾಡಿದ ಅವರು, ರಾಯಚೂರು ಪ್ರಕರಣದ ಬಗ್ಗೆ ಸರ್ಕಾರ ಗಂಭೀರವಾಗಿ ಚರ್ಚಿಸಿದೆ. ಆ ಪ್ರಕರಣವನ್ನು ಗಂಭೀರವಾಗಿಯೂ ಪರಿಗಣಿಸಲಾಗಿದೆ. ಕಲುಷಿತ ನೀರು ಕುಡಿದು 3 ಸಾವನ್ನಪ್ಪಿದ್ದು ಹೇಗೆ ಎನ್ನುವ ಬಗ್ಗೆಯೂ ತನಿಖೆಯ ನಡೆಸಲಾಗುತ್ತದೆ. ಈಗಾಗಲೇ, ನೀರಿನ ಮಾದರಿ ಸಂಗ್ರಹಿಸಲು ಸೂಚಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿ, ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ನಗರಸಭೆಯ ನೀರು ಕುಡಿದು 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಅಲ್ಲದೇ 3 ತೀವ್ರವಾಗಿ ಅಸ್ಪಸ್ಥಗೊಂಡು ಚಿಕಿತ್ಸೆ ಪಡೆಯದೇ ಸಾವನ್ನಪ್ಪಿದ್ದರು. ಕಲುಷಿತ ನೀರು ಸೇವನೆಯಿಂದ ಕೆಲವರ ಕಿಡ್ನಿಗೂ ಹಾನಿ ಉಂಟಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...