Thursday, August 13, 2026
Thursday, August 13, 2026

ರಾಯಚೂರಿನಲ್ಲಿ ಕಲುಷಿತ ನೀರು ಸೇವನೆ: 3 ಸಾವು

Date:

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 3 ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನೀರಿನ ಮಾದರಿಯನ್ನು ಸಂಗ್ರಹಿಸಿ, ಲ್ಯಾಬ್ ಗೆ ಕಳುಹಿಸಲು ಸೂಚಿಸಲಾಗಿದೆ. ಅಧಿಕಾರಿಗಳ ಲೋಪ ದೋಷದ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರ ರೊಂದಿಗೆ ಈ ವಿಷಯವಾಗಿ ಮಾತನಾಡಿದ ಅವರು, ರಾಯಚೂರು ಪ್ರಕರಣದ ಬಗ್ಗೆ ಸರ್ಕಾರ ಗಂಭೀರವಾಗಿ ಚರ್ಚಿಸಿದೆ. ಆ ಪ್ರಕರಣವನ್ನು ಗಂಭೀರವಾಗಿಯೂ ಪರಿಗಣಿಸಲಾಗಿದೆ. ಕಲುಷಿತ ನೀರು ಕುಡಿದು 3 ಸಾವನ್ನಪ್ಪಿದ್ದು ಹೇಗೆ ಎನ್ನುವ ಬಗ್ಗೆಯೂ ತನಿಖೆಯ ನಡೆಸಲಾಗುತ್ತದೆ. ಈಗಾಗಲೇ, ನೀರಿನ ಮಾದರಿ ಸಂಗ್ರಹಿಸಲು ಸೂಚಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿ, ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಯಚೂರಿನಲ್ಲಿ ನಗರಸಭೆಯ ನೀರು ಕುಡಿದು 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಅಲ್ಲದೇ 3 ತೀವ್ರವಾಗಿ ಅಸ್ಪಸ್ಥಗೊಂಡು ಚಿಕಿತ್ಸೆ ಪಡೆಯದೇ ಸಾವನ್ನಪ್ಪಿದ್ದರು. ಕಲುಷಿತ ನೀರು ಸೇವನೆಯಿಂದ ಕೆಲವರ ಕಿಡ್ನಿಗೂ ಹಾನಿ ಉಂಟಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...