Saturday, May 9, 2026
Saturday, May 9, 2026

ಭಾರತ ಸರ್ಕಾರವು ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ-ಅರಿಂದಮ್ ಬಾಗ್ಚಿ

Date:

ಪ್ರವಾದಿ ಮೊಹಮ್ಮದರ ಬಗೆಗಿನ ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರಾಷ್ಟ್ರಗಳ ಸಹಕಾರ ಒಕ್ಕೂಟದ ಟೀಕೆಗಳಿಗೆ ಕೇಂದ್ರ ಸರ್ಕಾರ ಸೋಮವಾರ ತಿರುಗೇಟು ನೀಡಿದೆ.

ಪ್ರವಾದಿ ಮೊಹಮ್ಮದರ ವಿರುದ್ಧ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಯನ್ನು ಇಸ್ಲಾಮಿಕ್ ಸಹಕಾರ ಸಂಘಟನೆ ಖಂಡಿಸಿತ್ತು.

ಇದು, ಭಾರತದಲ್ಲಿ ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ನಿಂದನೆಯನ್ನು ತೀವ್ರಗೊಳಿಸುವ, ಮುಸ್ಲಿಮರ ಆಚರಣೆಗಳ ವಿರುದ್ಧದ ವ್ಯವಸ್ಥಿತ ಕಾರ್ಯತಂತ್ರ’ ಎಂದು ಒಐಸಿ ಹೇಳಿತ್ತು.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್‌ ಬಾಗ್ಚಿ ಅವರು ‘ಇಸ್ಲಾಮಿಕ್ ಸಹಕಾರ ಸಂಘಟನೆಯ (ಒಐಸಿ) ಇತ್ತೀಚಿನ ಹೇಳಿಕೆಗೆ ಸಂಬಂಧಿಸಿದ ಮಾಧ್ಯಮದ ವರದಿಗಳನ್ನು ಗಮನಿಸಲಾಗಿದೆ. ಒಐಸಿಯ ಅನಗತ್ಯ ಮತ್ತು ಸಂಕುಚಿತ ಮನೋಭಾವದ ಹೇಳಿಕೆಗಳನ್ನು ಭಾರತ ಸರ್ಕಾರವು ಸ್ಪಷ್ಟವಾಗಿ ತಿರಸ್ಕರಿಸುತ್ತದೆ’ ಎಂದು ಹೇಳಿದ್ದಾರೆ.

ಭಾರತ ಸರ್ಕಾರವು ಎಲ್ಲಾ ಧರ್ಮಗಳ ವಿಚಾರದಲ್ಲಿ ಅಪಾರವಾದ ಗೌರವ ಹೊಂದಿದೆ. ‘ಧಾರ್ಮಿಕ ಮುಖಂಡರನ್ನು ನಿಂದಿಸುವಂಥ ಆಕ್ಷೇಪಾರ್ಹ ಟ್ವೀಟ್‌ಗಳು ಮತ್ತು ಹೇಳಿಕೆಗಳನ್ನು ಕೆಲ ವ್ಯಕ್ತಿಗಳು ನೀಡಿದ್ದಾರೆ. ಅವು ಯಾವುದೇ ರೀತಿಯಲ್ಲೂ ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಸಂಬಂಧಪಟ್ಟ ಸಂಸ್ಥೆ ಅವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...