Thursday, August 13, 2026
Thursday, August 13, 2026

ಉಪ ಚುನಾವಣೆಯಲ್ಲಿ ಆಯ್ಕೆಯಾದ ಉತ್ತರಾಖಂಡ್ ಸಿಎಂ ಧಾಮಿ

Date:

ಉತ್ತರಾಖಂಡ ಮುಖ್ಯಮಂತ್ರಿ, ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಅವರು ನಿರ್ಣಾಯಕ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಪರಾಭವಗೊಂಡಿದ್ದರಿಂದ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಉಪ ಚುನಾವಣೆಯ ಗೆಲುವು ಅಗತ್ಯವಾಗಿತ್ತು. ಚಂಪಾವತ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 55,025 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಕೆಲ ತಿಂಗಳ ಹಿಂದೆ ನಡೆದ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಿ, ಸೋಲು ಕಂಡಿದ್ದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್ ಧಾಮಿ ಚಂಪಾವತ್​ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ಈ ಹಿನ್ನೆಲೆಯಲ್ಲಿ ಪುನಃ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಧಾಮಿ ಅವರು, ಎದುರಾಳಿಯಾದ ಕಾಂಗ್ರೆಸ್​ ಅಭ್ಯರ್ಥಿ ನಿರ್ಮಲಾ ಗೆಹ್​ತೊರ್​, ಸಮಾಜವಾದಿ ಪಕ್ಷದ ಮನೋಜ್ ಕುಮಾರ್ ಭಟ್​ ಹಾಗೂ ಸ್ವತಂತ್ರ ಅಭ್ಯರ್ಥಿ ಹಿಮಾಂಶು ಗಡ್ಕೊಟಿ ಅವರನ್ನು ಸೋಲಿಸಿದ್ದಾರೆ.

ಚಂಪಾವತ್ ಕ್ಷೇತ್ರದ ಬಿಜೆಪಿ ಶಾಸಕ ಕೈಲಾಶ್ ಗೆಹ್ತೋರಿ ಅವರು ರಾಜೀನಾಮೆ ನೀಡುವ ಮೂಲಕ ತಮ್ಮ ಸ್ಥಾನ ತ್ಯಾಗ ಮಾಡಿ, ಪುಷ್ಕರ್ ಸಿಂಗ್ ಧಾಮಿ ಅವರಿಗೆ ಅನುವು ಮಾಡಿಕೊಟ್ಟಿದ್ದರು.

ಕುತೂಹಲದ ವಿಷಯ ಎಂದರೆ ಕಾಂಗ್ರೆಸ್​ ಅಭ್ಯರ್ಥಿ ನಿರ್ಮಲಾ ಠೇವಣಿ ಸಹ ಕಳೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಮೇ 31ರಂದು ನಡೆದಿದ್ದ ಚುನಾವಣೆಯಲ್ಲಿ ಧಾಮಿ ಅವರು ಎದುರಾಳಿ ಕಾಂಗ್ರೆಸ್​ನ ನಿರ್ಮಲಾ ವಿರುದ್ಧ 54 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 61,771 ಮತಗಳು ಚಲಾವಣೆಯಾಗಿದ್ದವು. 13ನೇ ಸುತ್ತಿನವರೆಗೆ 61 ಸಾವಿರಕ್ಕೂ ಹೆಚ್ಚು ಮತಗಳ ಎಣಿಕೆ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...