Thursday, December 18, 2025
Thursday, December 18, 2025

ಸಣ್ಣಪುಟ್ಟ ಲೋಪಗಳಾಗಿವೆ ಪ್ರತಿಕ್ರಿಯೆಗಳಿಗೆ ಮುಕ್ತ ಮನಸ್ಸಿನ ಸ್ವಾಗತ-ನಾಗೇಶ್

Date:

ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ 2 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ, ಮುಖ್ಯಮಂತ್ರಿ ಭೇಟಿ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರ ಸಂಬಂಧ 2 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

ಹಿಂದಿನ ಸಮಿತಿಯಲ್ಲಿ ಏನೀತ್ತು. ಬರಗೂರು ಸಮಿತಿ ಏನು ಮಾಡಿದೆ. ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ 2 ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...