Monday, June 15, 2026
Monday, June 15, 2026

ಸಣ್ಣಪುಟ್ಟ ಲೋಪಗಳಾಗಿವೆ ಪ್ರತಿಕ್ರಿಯೆಗಳಿಗೆ ಮುಕ್ತ ಮನಸ್ಸಿನ ಸ್ವಾಗತ-ನಾಗೇಶ್

Date:

ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ 2 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ, ಮುಖ್ಯಮಂತ್ರಿ ಭೇಟಿ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರ ಸಂಬಂಧ 2 ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

ಹಿಂದಿನ ಸಮಿತಿಯಲ್ಲಿ ಏನೀತ್ತು. ಬರಗೂರು ಸಮಿತಿ ಏನು ಮಾಡಿದೆ. ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ 2 ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...