Monday, December 8, 2025
Monday, December 8, 2025

ರಾಜ್ಯದಲ್ಲಿ ಕೋವಿಡ್ ಪ್ರಸರಣ ಮಾಸ್ಕ್ ಕಡಾಯ ಮಾಡಲು ಸಲಹಾ ಸಮಿತಿ ಸೂಚನೆ

Date:

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮಗಳನ್ನು ಪರಿಣಾಮಕಾರಿ ಜಾರಿಗೊಳಿಸಲು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸೂಚನೆ ನೀಡಿದೆ.

ಕೇಂದ್ರ ಸರ್ಕಾರ ಸೂಚಿಸಿರುವಂತೆ ರಾಜ್ಯದಲ್ಲಿ ನಿತ್ಯ ಕಡ್ಡಾಯವಾಗಿ 30 ಸಾವಿರ ಮಂದಿಯ ಸೋಂಕು ಪರೀಕ್ಷೆ ನಡೆಸಬೇಕು. ಜೊತೆಗೆ ಹೊಸ ರೂಪಾಂತರಿಗಳ ಪತ್ತೆ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ವಂಶವಾಹಿ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ತಜ್ಞರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕರು ಮಾಸ್ಕ್ ಕಡ್ಡಾಯ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಇನ್ನು ಕೊರೊನಾ ವೈರಸ್ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಕೊರೊನಾ ಸೋಂಕಿನ ಮೂರನೇ ಡೋಸ್ ಲಸಿಕೆ ಪಡೆಯಬೇಕು. 2 ಡೋಸ್ ಪಡೆದವರು 3 ನೇ ಡೋಸ್ ಲಸಿಕೆ ಪಡೆಯಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...