Friday, March 20, 2026
Friday, March 20, 2026

ರಾಜ್ಯದ 4 ಜಿಲ್ಲೆಗಳಲ್ಲಿ ಸಂಚಾರಿ ಆಸ್ಪತ್ರೆಗಳ ಪ್ರಾರಂಭ

Date:

ರಾಜ್ಯ ಸರ್ಕಾರವು ಜನರಿಗೆ ಮತ್ತೊಂದು ಸಂತೋಷದ ಸಮಾಚಾರ ತಿಳಿಸಿದೆ. ರಾಜ್ಯದ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸಂಚಾರಿ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಶೀಘ್ರವೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೂಡ ಮಾಡಿರುವ ಸಂಚಾರಿ ಪ್ರಯೋಗಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಬೊಮ್ಮಾಯಿ ಅವರು, ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಆಸ್ಪತ್ರೆಯನ್ನು ಆರಂಭಿಸಲಾಗುತ್ತದೆ. ಪ್ರಯೋಗ ಯಶಸ್ವಿಯಾದರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರಿ ಕ್ಲಿನಿಕ್ ಉಪಯೋಗವನ್ನು ಮನಗಂಡು ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ಮಂಗಳೂರುಮಹಾನಗರ ಪಾಲಿಕೆಗಳಿಗೆ ಇವುಗಳನ್ನು ಆರೋಗ್ಯ ಇಲಾಖೆಯಿಂದ ಹಸ್ತಾಂತರ ಮಾಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರಿಗೆ ಪ್ರಯೋಗಾಲಯದ ಸೇವೆ ಒದಗಿಸುವ ಉದ್ದೇಶದಿಂದ ಸಂಚಾರಿ ಆಸ್ಪತ್ರೆಯನ್ನು ಇನ್ಫೋಸೆಸ್ ಹಾಗೂ ರೋಟರಿ ಸಂಸ್ಥೆಗಳು ದೇಣಿಗೆಯಾಗಿ ನೀಡಿವೆ ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆಯ ಕೊರತೆ ಇರುವ ಕಡೆಗಳಲ್ಲಿ ಇಂತಹ ಸಂಚಾರಿ ಕ್ಲಿನಿಕ್ ಗಳನ್ನು ಒದಗಿಸಲಾಗುತ್ತಿದೆ. ಆರೋಗ್ಯ ಸೇವೆಗಳು ತಲುಪದೆ ಇರುವವರಿಗೆ ಈ ಸೇವೆಗಳನ್ನು ತಲುಪಲಿವೆ.ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಸಂಚಾರಿ ಕ್ಲಿನಿಕ್ ನಲ್ಲಿ ಸಾಂಕ್ರಮಿಕ ರೋಗಗಳಾದ ಕೊರೋನಾ ವೈರಸ್, ಟಿಬಿ, ಮಲೇರಿಯಾ, ಡೆಂಘಿ ಮತ್ತು ಸಾಂಕ್ರಮಿಕ ರೋಗಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗಿದೆ. ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ನಿರಂತರವಾಗಿ ಗ್ರಾಮೀಣ ಭಾಗದ ಜನರಿಗೆ ಸೂಕ್ತ ಸಮಯದಲ್ಲಿ ನೀಡಲಿವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...