Friday, April 10, 2026
Friday, April 10, 2026

ಅರಣ್ಯ ರಕ್ಷಣೆ ಎಲ್ಲರ ಹೊಣೆ- ಶಾಸಕ ರುದ್ರೇಗೌಡರು

Date:

ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರು ಕರೆ ನೀಡಿದ್ದಾರೆ.

ಅವರು ಭಾನುವಾರ ಅರಣ್ಯ ಇಲಾಖೆ ವತಿಯಿಂದ ಆಯನೂರು ವಲಯದ ಕೆಂಪಿನಕೊಪ್ಪದಲ್ಲಿ ಆಯೋಜಿಸಲಾಗಿದ್ದ ಬಿತ್ತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಉತ್ತಮ ಫಲವನ್ನೇ ನೀಡುವುದು. ಸಾಲು ಮರದ ತಿಮ್ಮಕ್ಕನಂತಹವರು ತಮ್ಮ ಇಳಿವಯಸ್ಸಿನಲ್ಲಿ ವೃಕ್ಷ ರಕ್ಷಣೆಗೆ ಜೀವನವನ್ನು ಮುಡಿಪಾಗಿಟ್ಟಿರುವುದು ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮಾತನಾಡಿ, ಮಕ್ಕಳು ಪರಿಸರ, ಅರಣ್ಯದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಗಿಡವನ್ನು ನೆಡಲು ನಮ್ಮಿಂದ ಸಾಧ್ಯವಾಗದಿದ್ದರೂ, ಮರವನ್ನು ಕಡಿಯುವ ಕೃತ್ಯಕ್ಕೆ ಯಾರೂ ಕೈ ಹಾಕಬಾರದು. ಪರಿಸರದಲ್ಲಿರುವ ಹಕ್ಕಿಗಳು, ಸುತ್ತಮುತ್ತಲಿನ ಮರಗಿಡಗಳ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಬೇಕು. ಸಸಿಗಳನ್ನು ನೆಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಕೆಂಪಿನಕೊಪ್ಪ ಅರಣ್ಯ ವಲಯದಲ್ಲಿ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು, ಗಣ್ಯರು ಈ ಸಂದರ್ಭದಲ್ಲಿ ಬೀಜಗಳನ್ನು ಬಿತ್ತನೆ ಮಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಯು.ಶಂಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...