Monday, May 25, 2026
Monday, May 25, 2026

ದೇಶಕ್ಕಾಗಿ ಪ್ರಧಾನಿಯವರು ₹155 ಕೋಟಿ ಸಾಲಮಾಡಿದ್ದಾರೆ- ಸಿದ್ಧರಾಮಯ್ಯ

Date:

ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ 155 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ. ಲೆಕ್ಕ ಹಾಕಿ ನೋಡಿದರೆ ಪ್ರತಿಯೊಬ್ಬ ‍ಪ್ರಜೆಯ ತಲೆ ಮೇಲೆ 1.75 ಲಕ್ಷ ರೂಪಾಯಿ ಸಾಲ ಹೇರಿದ್ದಾರೆ. ಇಂಥವರಿಂದ ದೇಶ ಉಳಿಯುತ್ತದೆಯೇ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ, ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ದೇಶದ ಸಾಲ 53.11 ಲಕ್ಷ ಕೋಟಿ ರೂಪಾಯಿ ಮಾತ್ರ ಇತ್ತು. ಆದರೆ, ಬಿಜೆಪಿ ಸರ್ಕಾರ ಬಂದ 8 ವರ್ಷಗಳಲ್ಲಿ 3 ಪಟ್ಟು ಸಾಲ ಮಾಡಿದ್ದಾರೆ. ಈ ಸಾಲವನ್ನು ಮೋದಿ ತೀರಿಸುತ್ತಾರಾ? ದೇಶದ ಜನರೇ ಈ ಭಾರ ಹೊತ್ತುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ರಾಜ್ಯದಿಂದ ಒಟ್ಟು 19 ಲಕ್ಷ ಕೋಟಿ ರೂಪಾಯಿ ತೆರಿಗೆ ಸಂದಾಯ ಮಾಡಲಾಗಿದೆ. ಆದರೆ, ರಾಜ್ಯಕ್ಕೆ ಮರಳಿ ಸಿಕ್ಕ ತೆರಿಗೆ ಪಾಲು ಕೇವಲ 1.29 ಲಕ್ಷ ಕೋಟಿ. ರೂಪಾಯಿ ಇನ್ನೂ 18.71 ಲಕ್ಷ ಕೋಟಿ ರೂಪಾಯಿಯನ್ನು ಕೇಂದ್ರವೇ ಇಟ್ಟುಕೊಂಡಿದೆ. ಇದೆಲ್ಲ ಯಾರು ದುಡ್ಡು? ರಾಜ್ಯದ ಜನ ದುಡಿದು ಕೊಟ್ಟ ದುಡ್ಡು. ಇಂಥವರಿಗೆ ಮತ್ತೆ ಮತ ಕೊಡಬೇಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

2014ರಲ್ಲಿ ಕಚ್ಚಾತೈಲದ ಬೆಲೆ ಒಂದು ಬ್ಯಾರಲ್‌ಗೆ 118 ಡಾಲರ್ ಇತ್ತು. ಈಗ 113 ಡಾಲರ್‌ಗೆ ಇಳಿದಿದೆ. ಆದರೆ, ದೇಶದಲ್ಲಿ ‍ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಮಾತ್ರ ಗಗನಕ್ಕೇರುತ್ತಿದೆ. ಕಾರಣ ಕೇಳಿದರೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ದುಬಾರಿಯಾಗಿದೆ ಎಂದು ಸುಳ್ಳು ಹೇಳಿ ಜನರಿಗೆ ಮೋಸ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಯಲ್ಲಿ ಶಿಕ್ಷಕರು, ಪದವೀಧರರು ಮತದಾರರು. ಮುಂದಿನ ಸಾರ್ವತ್ರಿಕ ಚುನಾವಣೆಗೆ ಇದು ದಿಕ್ಸೂಚಿ ಆಗಿದೆ. ಪ್ರಜ್ಞಾವಂತರಾದ ನೀವು ಯೋಚಿಸಿ ಮತ ಹಾಕಿ ಎಂದು ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...