Monday, May 25, 2026
Monday, May 25, 2026

ಮುಂಬೈ to ಅಹ್ಮದಾಬಾದ್ ಬುಲೆಟ್ ರೈಲು ದರ ಇಳಿಕೆ

Date:

ಪ್ರಧಾನಿ ಮೋದಿ ಸರ್ಕಾರದ ಅನೇಕ ಯೋಜನೆಗಳಲ್ಲಿ ಒಂದಾದ ಬುಲೆಟ್ ಟ್ರೈನ್ ಗೆ ಈಗ ಒಳ್ಳೆಯ ಕಾಲ ಕೂಡಿ ಬಂದಿದೆ.

ಅದೇನು ಅಂದ್ರೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ಟ್ರೈನ್ ದರವನ್ನು ಫಸ್ಟ್ ಎಸಿಗೆ ಸಮನಾಗಿ ಇರಿಸಲು ಸೂಚನೆ ನೀಡಿದ್ದಾರೆ.

ಬಾಡಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೂ, ಇದು ಜನರಿಗೆ ಕೈಗೆಟುಕುವ ದರದಲ್ಲಿ ಸಿಗಲಿದೆ ಎಂದು ತಿಳಿಸಿದ್ದಾರೆ.

ಇದಕ್ಕಾಗಿ, ಫಸ್ಟ್ ಎಸಿಯ ಆಧಾರದ ಮೇಲೆ ಬುಲೆಟ್ ಟ್ರೈನ್ ದರ ನಿಗದಿ ಮಾಡಲಾಗುತ್ತಿದೆ. ಇದು ತುಂಬಾ ಜಾಸ್ತಿ ದರವೇನಿಲ್ಲ, ವಿಮಾನ ದರಕ್ಕಿಂತ ಕಡಿಮೆಯಿರುತ್ತದೆ. ಆದರೆ, ಇಯ್ಲಿ ಸಿಗುವ ಸೌಲಭ್ಯಗಳು ಉತ್ತಮವಾಗಿರುತ್ತವೆ. ಯೋಜನೆ ಪೂರ್ಣಗೊಂಡ ನಂತರ ಬಾಡಿಗೆ ನಿಗದಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅಶ್ವಿನಿ ವೈಷ್ಣವ್ ಅವರು ಬುಲೆಟ್ ರೈಲು ಯೋಜನೆಗೆ ಭೇಟಿ ನೀಡಿ, ಮುಂಬೈ, ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆ ಪೂರ್ಣಗೊಂಡ ನಂತರವೇ 2ನೇ ಹೈಸ್ಪೀಡ್ ರೈಲು ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಈ ನಿಟ್ಟಿನಲ್ಲಿ ಉತ್ತಮ ಪ್ರಗತಿ ಕಾಣುತ್ತಿರುವುದರಿಂದ 2026ರಲ್ಲಿ ಗುಜರಾತ್‌ನ ಸೂರತ್ ಹಾಗೂ ಬಿಲಿಮೊರಾ ನಡುವೆ ದೇಶದ ಮೊದಲ ಬುಲೆಟ್ ರೈಲು ಓಡಿಸುವ ಗುರಿಯನ್ನು ಸಾಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಅಹಮದಾಬಾದ್,ಮುಂಬೈ ಬುಲೆಟ್ ರೈಲು ಯೋಜನೆಯ ಪ್ರಗತಿಯನ್ನು ಪರಿಶೀಲಿಸಲು ಸೂರತ್‌ಗೆ ಬಂದಿದ್ದರು.

2026 ರಲ್ಲಿ ಸೂರತ್ ಹಾಗೂ ಬಿಲಿಮೋರಾ ನಡುವೆ ಮೊದಲ ಬುಲೆಟ್ ರೈಲು ಓಡಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದರಲ್ಲಿ ಉತ್ತಮ ಪ್ರಗತಿ ಕಾಣುತ್ತಿದ್ದೇವೆ, ಅಷ್ಟರೊಳಗೆ ರೈಲು ಓಡಿಸುವ ಕಾರ್ಯವನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...