Monday, July 13, 2026
Monday, July 13, 2026

ಪಿಯು ಪಠ್ಯ ಪರಿಷ್ಕರಣೆ ಮಾಡಿಸುವುದಿಲ್ಲ-ಸಚಿವ ನಾಗೇಶ್

Date:

ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ವಿವಾದದ ಬಳಿಕ, ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ. ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,
ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯದಲ್ಲಿ ಕೆಲ ಅಂಶಗಳ ಬಗ್ಗೆ ಆಕ್ಷೇಪಗಳಿದ್ದವು ಆ ಅಧ್ಯಾಯವನ್ನು ಪರಿಷ್ಕರಿಸುವ ಹೊಣೆಯನ್ನು ರೋಹಿತ್ ಚಕ್ರತೀರ್ಥಗೆ ನೀಡಲಾಗಿತ್ತು. ಆದರೆ ಸಮಿತಿ ಈಗಾಗಲೇ ವಿಸರ್ಜಿಸಲಾಗಿದೆ. ಹೀಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನೂ ವಿಸರ್ಜಿಸಿದಂತಾಗಿದೆ. ಅದರ ವರದಿಯನ್ನು ಪಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಪಿಯು ಪಠ್ಯಪುಸ್ತಕ ಯಥಾವತ್ತಾಗಿ ಇರಲಿದೆ. ಪರಿಷ್ಕರಣೆ ಮಾಡಲ್ಲ. ಈಗ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ಮಾಡಲಾಗಿದೆ. ಅದ್ದರಿಂದ ಈ ಸಮಿತಿಯಿಂದ ಪರಿಷ್ಕರಣೆ ಮಾಡಿಸುವುದಿಲ್ಲ ಎಂದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...