Monday, May 25, 2026
Monday, May 25, 2026

ಪಿಯು ಪಠ್ಯ ಪರಿಷ್ಕರಣೆ ಮಾಡಿಸುವುದಿಲ್ಲ-ಸಚಿವ ನಾಗೇಶ್

Date:

ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ವಿವಾದದ ಬಳಿಕ, ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ. ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,
ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯದಲ್ಲಿ ಕೆಲ ಅಂಶಗಳ ಬಗ್ಗೆ ಆಕ್ಷೇಪಗಳಿದ್ದವು ಆ ಅಧ್ಯಾಯವನ್ನು ಪರಿಷ್ಕರಿಸುವ ಹೊಣೆಯನ್ನು ರೋಹಿತ್ ಚಕ್ರತೀರ್ಥಗೆ ನೀಡಲಾಗಿತ್ತು. ಆದರೆ ಸಮಿತಿ ಈಗಾಗಲೇ ವಿಸರ್ಜಿಸಲಾಗಿದೆ. ಹೀಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನೂ ವಿಸರ್ಜಿಸಿದಂತಾಗಿದೆ. ಅದರ ವರದಿಯನ್ನು ಪಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಪಿಯು ಪಠ್ಯಪುಸ್ತಕ ಯಥಾವತ್ತಾಗಿ ಇರಲಿದೆ. ಪರಿಷ್ಕರಣೆ ಮಾಡಲ್ಲ. ಈಗ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ಮಾಡಲಾಗಿದೆ. ಅದ್ದರಿಂದ ಈ ಸಮಿತಿಯಿಂದ ಪರಿಷ್ಕರಣೆ ಮಾಡಿಸುವುದಿಲ್ಲ ಎಂದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...