Monday, December 15, 2025
Monday, December 15, 2025

ಹೆಣ್ಣು ಮಗುವಿನ ಭವಿಷ್ಯಕ್ಕೆ ಸರ್ಕಾರದ ಯೋಜನೆಗಳ ಮಾಹಿತಿ

Date:

ನಿಲಂಬೂರು,ನಂಜನಗೂಡ,ಮೈಸೂರು ರೈಲ್ವೆ ಮಾರ್ಗ ಯೋಜನೆಯಲ್ಲಿ ವಿಳಂಬ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಯೋಜನೆಯನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಕೇರಳದ ವಯನಾಡ್‌ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್‌ ಗಾಂಧಿ ಅವರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಪತ್ರ ಬರೆದಿದ್ದಾರೆ.

ಈ ರೈಲ್ವೆ ಮಾರ್ಗ ಕರ್ನಾಟಕದ ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹಾದು ಹೋಗುತ್ತದೆ ಎಂದು ಕರ್ನಾಟಕದ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ರಾಹುಲ್‌ ಗಾಂಧಿ, ಈ ಯೋಜನೆ ಜಾರಿಗೆ ಒತ್ತಾಯಿಸಿರುವುದು ಇಲ್ಲಿ ಗಮನಾರ್ಹ.

2016-17ರಲ್ಲೇ ಯೋಜನೆಯನ್ನು ಬಂಡವಾಳ ಹೂಡಿಕೆ ಯೋಜನೆಯಲ್ಲಿ ಸೇರಿಸಲಾಗಿತ್ತು. ಆದರೆ, ಈ ಯೋಜನೆ ಬಗ್ಗೆ ಈವರೆಗೂ ಸ್ಪಷ್ಟತೆ ಸಿಗದೇ ಇರುವುದು ಜನಾಕ್ರೋಶ ಹೆಚ್ಚಿಸಿದೆ. ಕೇರಳ ರೈಲು ಅಭಿವೃದ್ಧಿ ಪ್ರಾಧಿಕಾರಕ್ಕೆ ರೈಲ್ವೆ ಇಲಾಖೆ ಜೊತೆ ಕೆಲಸ ಮಾಡಿ ಯೋಜನೆ ಜಾರಿ ಮಾಡುವಂತೆ ಕೇರಳ ಸರ್ಕಾರ ಹೊಣೆ ಹೊರಿಸಿದೆ. ಆದರೂ ಯೋಜನೆ ಪ್ರಗತಿ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ರಾ.ಹೆ.766ರಲ್ಲಿ ರಾತ್ರಿ ಸಂಚಾರ ನಿಷೇಧವಿದೆ. ಇದು ಕರ್ನಾಟಕ-ಕೇರಳ ಅಂತಾರಾಜ್ಯ ಸಂಚಾರಕ್ಕೆ ಅಡ್ಡಿ ಒಡ್ಡಿದೆ. ಇಂಥ ಸಂದರ್ಭದಲ್ಲಿ ರೈಲು ಯೋಜನೆ ವಿಳಂಬವು ಸಮಸ್ಯೆ ಇಮ್ಮಡಿಗೊಳಿಸಿದೆ ಎಂದಿದ್ದಾರೆ.

ನಿಲಂಬೂರು-ನಂಜನಗೂಡು ಮಾರ್ಗ ರಚನೆಯಿಂದ ಬೆಂಗಳೂರು,ತಿರುವನಂತಪುರ ಪ್ರಯಾಣ ಅವಧಿ ಇಳಿಸುತ್ತದೆ. ಈ ಭಾಗದ ಜನಜೀವನ ಸುಧಾರಿಸುತ್ತದೆ ಎಂದು ರೈಲ್ವೆ ಸಚಿವರಿಗೆ ಬರೆದ ಪತ್ರದಲ್ಲಿ ರಾಹುಲ್‌ ಹೇಳಿದ್ದಾರೆ.

ಈ ಪ್ರದೇಶದಲ್ಲಿ ಜೀವನೋಪಾಯದ ಅವಕಾಶಗಳನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಸಂದರ್ಭದಲ್ಲಿ, ನಿರ್ದಿಷ್ಟವಾಗಿ ಯೋಜನೆಯ ಅನುಷ್ಠಾನದಲ್ಲಿ ಅಸಮಂಜಸ ವಿಳಂಬದ ಬಗ್ಗೆ ದಯೆಯಿಂದ ಪರಿಶೀಲಿಸಲು ನಾನು ನಿಮ್ಮನ್ನು ಕೋರುತ್ತೇನೆ ಎಂದು ಗಾಂಧಿ ಅವರು ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ಸಂಚಾರ ನಿಷೇಧದೊಂದಿಗೆ ಸೀಮಿತ ರೈಲ್ವೇ ಸಂಪರ್ಕವು ವಯನಾಡ್‌ನಲ್ಲಿ ಅಂತರ-ರಾಜ್ಯ ಮತ್ತು ಅಂತರ-ರಾಜ್ಯ ಚಲನಶೀಲತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಯೋಜನೆ ಜಾರಿ ವಿಳಂಬದ ವಿರುದ್ಧ ವಯನಾಡು ಲೋಕಸಭಾ ಕ್ಷೇತ್ರದ ಜನರ ಸುದೀರ್ಘ ಹೋರಾಟ ನಡೆಸುತ್ತಿದೆ. ಸಂಸತ್ತಿನಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ರೈಲ್ವೇ ಸಚಿವಾಲಯಕ್ಕೆ ಪತ್ರ ಬರೆದಿರುವುದಾಗಿ ಸಚಿವರಿಗೆ ಬರೆದ ಪತ್ರದಲ್ಲಿ ಗಾಂಧಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...