Friday, February 6, 2026
Friday, February 6, 2026

ಸಮರದಲ್ಲಿ ಸಪ್ಪಗಾದ ರಷ್ಯ:ಚೇತರಿಕೆಗೆ ನಿಧಿ ಸಂಗ್ರಹದತ್ತ ಉಕ್ರೇನ್

Date:

ನಮ್ಮ ಸರ್ಕಾರ ಸೈನ್ಯಕ್ಕೆ ಧನಸಹಾಯ ನೀಡಲು ಹಾಗೂ ಯುದ್ಧದಿಂದ ನಾಶವಾದ ನಗರಗಳು ಮತ್ತು ಪಟ್ಟಣಗಳನ್ನು ಪುನಃ ನಿರ್ಮಿಸಲು ಹಣ ಸಂಗ್ರಹಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ರಷ್ಯಾದ ಪಡೆಗಳನ್ನು ಹೊರಹಾಕಿದ ಸ್ಥಳಗಳಲ್ಲಿ ವಿದ್ಯುತ್, ಅನಿಲ, ನೀರು ಮತ್ತು ಫೋನ್ ಸೇವೆಯನ್ನು ಪುನಃಸ್ಥಾಪಿಸಲು ಈಗಾಗಲೇ ಕೆಲಸ ನಡೆಯುತ್ತಿದೆ. ಆಸ್ಪತ್ರೆಗಳನ್ನು ಮರು ಸಜ್ಜುಗೊಳಿಸಲು ಹಾಗೂ ಬಂಕರ್​​‌ಗಳನ್ನು ತೆಗೆದುಹಾಕಲು ಹೆಚ್ಚಿನ ಕಾರ್ಯ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಮೊದಲ ತಿಂಗಳಲ್ಲಿ $50 ಮಿಲಿಯನ್‌ಗಿಂತಲೂ ಹೆಚ್ಚು ನೆರವು ಹರಿದು ಬಂದಿದೆ. ಉಕ್ರೇನ್​​ ಟೆನಿಸ್ ಆಟಗಾರ್ತಿ ಎಲಿನಾ ಸ್ವಿಟೋಲಿನಾ ಹಾಗೂ ಮಾಜಿ ಸಾಕರ್ ಆಟಗಾರ ಆಂಡ್ರಿ ಶೆವ್ಚೆಂಕೊ ಅವರನ್ನು ನಿಧಿಸಂಗ್ರಹ ವೇದಿಕೆಗೆ ರಾಯಭಾರಿಯಾಗಿದ್ದಾರೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕಳೆದ ದಿನದಿಂದ ಪೂರ್ವ ಡಾನ್​ಬಾಸ್​ ಪ್ರದೇಶದಲ್ಲಿ ರಷ್ಯಾದ ಪಡೆಗಳು ಯಾವುದೇ ಮಹತ್ವದ ಪ್ರಗತಿಯನ್ನು ಸಾಧಿಸಿಲ್ಲ. ಈ ಪ್ರದೇಶದಲ್ಲಿ ಸೈನಿಕರ ರಕ್ಷಣಾ ಕಾರ್ಯ ಮುಂದುವರೆದಿದೆ. ರಷ್ಯನ್ನರು ಸ್ಪಷ್ಟವಾಗಿ ಇಷ್ಟೊಂದು ಪ್ರತಿರೋಧವನ್ನು ಎದುರಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ.

ರಷ್ಯಾದ ಸೈನ್ಯವು ಎಸಗಿದ ಯುದ್ಧಾಪರಾಧಗಳ ಬಗ್ಗೆ ದೃಢಪಡಿಸಿದ ಮಾಹಿತಿಯೊಂದಿಗೆ ಉಕ್ರೇನ್ ಮುಂದಿನ ವಾರ ವಿಶೇಷ ಬುಕ್ ಆಫ್ ಎಕ್ಸಿಕ್ಯೂಶನರ್ಸ್ ಅನ್ನು ಬಿಡುಗಡೆ ಮಾಡಲು ಯೋಜಿಸಿದೆ ಎಂದು ಇದೇ ವೇಳೆ ಉಕ್ರೇನ್​​ ಅಧ್ಯಕ್ಷರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...