Wednesday, August 26, 2026
Wednesday, August 26, 2026

ಸಮರದಲ್ಲಿ ಸಪ್ಪಗಾದ ರಷ್ಯ:ಚೇತರಿಕೆಗೆ ನಿಧಿ ಸಂಗ್ರಹದತ್ತ ಉಕ್ರೇನ್

Date:

ನಮ್ಮ ಸರ್ಕಾರ ಸೈನ್ಯಕ್ಕೆ ಧನಸಹಾಯ ನೀಡಲು ಹಾಗೂ ಯುದ್ಧದಿಂದ ನಾಶವಾದ ನಗರಗಳು ಮತ್ತು ಪಟ್ಟಣಗಳನ್ನು ಪುನಃ ನಿರ್ಮಿಸಲು ಹಣ ಸಂಗ್ರಹಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ರಷ್ಯಾದ ಪಡೆಗಳನ್ನು ಹೊರಹಾಕಿದ ಸ್ಥಳಗಳಲ್ಲಿ ವಿದ್ಯುತ್, ಅನಿಲ, ನೀರು ಮತ್ತು ಫೋನ್ ಸೇವೆಯನ್ನು ಪುನಃಸ್ಥಾಪಿಸಲು ಈಗಾಗಲೇ ಕೆಲಸ ನಡೆಯುತ್ತಿದೆ. ಆಸ್ಪತ್ರೆಗಳನ್ನು ಮರು ಸಜ್ಜುಗೊಳಿಸಲು ಹಾಗೂ ಬಂಕರ್​​‌ಗಳನ್ನು ತೆಗೆದುಹಾಕಲು ಹೆಚ್ಚಿನ ಕಾರ್ಯ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಮೊದಲ ತಿಂಗಳಲ್ಲಿ $50 ಮಿಲಿಯನ್‌ಗಿಂತಲೂ ಹೆಚ್ಚು ನೆರವು ಹರಿದು ಬಂದಿದೆ. ಉಕ್ರೇನ್​​ ಟೆನಿಸ್ ಆಟಗಾರ್ತಿ ಎಲಿನಾ ಸ್ವಿಟೋಲಿನಾ ಹಾಗೂ ಮಾಜಿ ಸಾಕರ್ ಆಟಗಾರ ಆಂಡ್ರಿ ಶೆವ್ಚೆಂಕೊ ಅವರನ್ನು ನಿಧಿಸಂಗ್ರಹ ವೇದಿಕೆಗೆ ರಾಯಭಾರಿಯಾಗಿದ್ದಾರೆ ಎಂದು ಝೆಲೆನ್ಸ್ಕಿ ಅವರು ತಿಳಿಸಿದ್ದಾರೆ.

ಕಳೆದ ದಿನದಿಂದ ಪೂರ್ವ ಡಾನ್​ಬಾಸ್​ ಪ್ರದೇಶದಲ್ಲಿ ರಷ್ಯಾದ ಪಡೆಗಳು ಯಾವುದೇ ಮಹತ್ವದ ಪ್ರಗತಿಯನ್ನು ಸಾಧಿಸಿಲ್ಲ. ಈ ಪ್ರದೇಶದಲ್ಲಿ ಸೈನಿಕರ ರಕ್ಷಣಾ ಕಾರ್ಯ ಮುಂದುವರೆದಿದೆ. ರಷ್ಯನ್ನರು ಸ್ಪಷ್ಟವಾಗಿ ಇಷ್ಟೊಂದು ಪ್ರತಿರೋಧವನ್ನು ಎದುರಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ.

ರಷ್ಯಾದ ಸೈನ್ಯವು ಎಸಗಿದ ಯುದ್ಧಾಪರಾಧಗಳ ಬಗ್ಗೆ ದೃಢಪಡಿಸಿದ ಮಾಹಿತಿಯೊಂದಿಗೆ ಉಕ್ರೇನ್ ಮುಂದಿನ ವಾರ ವಿಶೇಷ ಬುಕ್ ಆಫ್ ಎಕ್ಸಿಕ್ಯೂಶನರ್ಸ್ ಅನ್ನು ಬಿಡುಗಡೆ ಮಾಡಲು ಯೋಜಿಸಿದೆ ಎಂದು ಇದೇ ವೇಳೆ ಉಕ್ರೇನ್​​ ಅಧ್ಯಕ್ಷರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...