Monday, December 8, 2025
Monday, December 8, 2025

ಪಠ್ಯ ಪುಸ್ತಕ ವಿಚಾರದಲ್ಲಿ ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ-ನಾಗೇಶ್

Date:

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ. ಪರಿಷ್ಕರಣೆ ಮಾಡುವಾಗ ದೊಡ್ಡ ತಪ್ಪು ಮಾಡಬಾರದು. ಇಂತಹ ಒಂದು ಜವಾಬ್ದಾರಿ ಸಿಕ್ಕಾಗ ಜಾಗರೂಕತೆಯಾಗಿ ಇರಬೇಕು. ಆದರೆ, ತಪ್ಪು ಆಗಿದ್ದನ್ನು ನಾವು ಗಮನಿಸಿ ಅದನ್ನು ಮರು ಪರಿಷ್ಕರಣೆಗೆ ಮುಂದಾಗಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

ಧಾರವಾಡದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಬಸವಣ್ಣನ ಪಠ್ಯದಲ್ಲಿ ಅನೇಕ ಹೊಸ ವಿಚಾರದಲ್ಲಿ ಲೋಪದೋಷಗಳನ್ನು ಯಾರೇ ಕಂಡು ಹಿಡಿದರೂ ಅದನ್ನು ಸರಿ ಮಾಡುತ್ತೇವೆ. ಯಾವುದೇ ತಪ್ಪನ್ನು ಮುಚ್ಚಿಡುವುದು ನಾವು ಮಾಡುತ್ತಿಲ್ಲ. ವಾದ ವಿವಾದ ಮಕ್ಕಳ ಮೇಲೆ ಪರಿಣಾಮ ಬಿರಬಾರದು. ಆದ್ದರಿಂದ, ಅದನ್ನು ಸರಿ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. 84% ರಷ್ಟು ಬಿಇಓ ಕಚೇರಿ ಸೇರಿದೆ.

ಇನ್ನೊಂದು ತಿಂಗಳಲ್ಲಿ ಎಲ್ಲ ಪುಸ್ತಕ ಕೊಡುವ ಹಾಗಾಗುತ್ತದೆ ಎಂದು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಈ ಬಾರಿ ಅತಿಥಿ ಶಿಕ್ಷಕರನ್ನು ಶಿಕ್ಷಕರನ್ನಾಗಿ ತೆಗೆದುಕೊಳ್ಳುತ್ತಿದ್ದೇವೆ. ಬಿಜೆಪಿ ಸರ್ಕಾರದಲ್ಲಿ 27 ಸಾವಿರ ಅತಿಥಿ ಶಿಕ್ಷಕರನ್ನು ತೆಗೆದುಕೊಂಡಿದ್ದೇವ. ಮುಂಬರೋ ದಿನಗಲ್ಲಿ ಸೈಕಲ್ ವಿತರಣೆಯನ್ನು ಸಹ ಮಾಡುವ ವಿಚಾರ ಇದೆ ಸಾಹಿತಿಗಳನ್ನು ಯಾವುದೇ ರೀತಿಯಲ್ಲಿ ಕಡೆಗಣಿಸಿಲ್ಲ. ಮಹಾರಾಜರನ್ನು ತೆಗೆದು ಟಿಪ್ಪು ಸುಲ್ತಾನ್‌ ನನ್ನು ತರಲಾಗಿತ್ತು. ಹಿಂದೂ ಸಂಸ್ಕೃತಿ ಕಿತ್ತುಹಾಕಿ ನೆಹರೂ ಪಾಠ ತರಲಾಗಿತ್ತು. ಇಸ್ಲಾಂ ಮತ್ತು ಕ್ರೈಸ್ತರನ್ನ ಮಾತ್ರ ಪುಸ್ತಕದಲ್ಲಿ ತರಲಾಗಿತ್ತುವ. ಇಂತಹ 100 ಉದಾಹರಣೆಗಳು ಇವೆ ಎಂದು ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...