Sunday, December 14, 2025
Sunday, December 14, 2025

ರಿಷಭ್ ಪಂತ್ ದ.ಆಫ್ರಿಕಾ ವಿರುದ್ಧ ಟಿ20 ಟೀಮ್ ಇಂಡಿಯಾ ನಾಯಕ

Date:

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ ಆರಂಭಕ್ಕೆ 24 ಗಂಟೆ ಬಾಕಿ ಇದೆ. ಟೀಂ ಇಂಡಿಯಾದಿಂದ ಹೊರಬಿದ್ದ ನಾಯಕ ಕೆ.ಎಲ್ ರಾಹುಲ್ ಬದಲಿಗೆ ರಿಷಭ್ ಪಂತ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಆದರೆ, ನಿನ್ನೆ ಬುಧವಾರ ಸಂಜೆ ಟೀಂ ಇಂಡಿಯಾ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಂತೆ ಪಂತ್ ನಾಯಕನಾಗಿ ಆಯ್ಕೆಯಾಗಿದ್ದರ ಕುರಿತು ಆಘಾತಗೊಂಡ ರಿಷಭ್, ಅದರಿಂದ ಹೊರಬರಲು ಸ್ವಲ್ಪ ಸಮಯವೇ ಆಗಿತೆಂದು ನಾಯಕಾಗಿ ಆಯ್ಕೆಯಾಗಿ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾನು ಟೀಮ್ ಇಂಡಿಯಾವನ್ನು ಮುನ್ನಡೆಸುತ್ತೇವೆ ಎಂಬ ಅಂಶವನ್ನು ಜೀರ್ಣಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ರಿಷಬ್ ಪಂತ್ ಅವರು ಹೇಳಿಕೊಂಡಿದ್ದಾರೆ.

ನನಗೆ ಅದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಗಂಟೆಯ ಹಿಂದೆ ನನಗೆ ಗೊತ್ತಾಯಿತು ಎಂದು ರಿಷಬ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದು ತುಂಬಾ ಒಳ್ಳೆಯ ಭಾವನೆ, ಆದರೆ, ತುಂಬಾ ಒಳ್ಳೆಯ ಸಂದರ್ಭಗಳಲ್ಲಿ ಬಂದಿಲ್ಲ. ಆದರೂ, ಕೂಡ ಅದೇ ಸಮಯದಲ್ಲಿ ನನಗೆ ಸಂತೋಷವಾಗಿದೆ. ಭಾರತ ತಂಡವನ್ನು ಮುನ್ನಡೆಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಏರಿಳಿತದ ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು ಎಂದು ರಿಷಭ್ ಪಂತ್ ಅವರು ಹೇಳಿದ್ದಾರೆ.

ನಾಯಕನಾಗಿ, ಇದು ನನಗೆ ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ನೀವು ಮತ್ತೆ ಮತ್ತೆ ಅದೇ ಕೆಲಸವನ್ನು ಮಾಡುತ್ತಿರುವಾಗ ನೀವು ಸುಧಾರಿಸುತ್ತೀರಿ. ನಾನು ತಪ್ಪುಗಳಿಂದ ಕಲಿಯುತ್ತಲೇ ಇರುವ ವ್ಯಕ್ತಿ ಮತ್ತು ಮುಂದಿನ ದಿನಗಳಲ್ಲಿ ಅದು ನನಗೆ ಸಹಾಯಕ ಎಂದು ನಾನು ಭಾವಿಸುತ್ತೇನೆ ಅಂತ ತಮ್ಮ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...