Sunday, October 6, 2024
Sunday, October 6, 2024

ರಿಷಭ್ ಪಂತ್ ದ.ಆಫ್ರಿಕಾ ವಿರುದ್ಧ ಟಿ20 ಟೀಮ್ ಇಂಡಿಯಾ ನಾಯಕ

Date:

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ ಆರಂಭಕ್ಕೆ 24 ಗಂಟೆ ಬಾಕಿ ಇದೆ. ಟೀಂ ಇಂಡಿಯಾದಿಂದ ಹೊರಬಿದ್ದ ನಾಯಕ ಕೆ.ಎಲ್ ರಾಹುಲ್ ಬದಲಿಗೆ ರಿಷಭ್ ಪಂತ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಆದರೆ, ನಿನ್ನೆ ಬುಧವಾರ ಸಂಜೆ ಟೀಂ ಇಂಡಿಯಾ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಂತೆ ಪಂತ್ ನಾಯಕನಾಗಿ ಆಯ್ಕೆಯಾಗಿದ್ದರ ಕುರಿತು ಆಘಾತಗೊಂಡ ರಿಷಭ್, ಅದರಿಂದ ಹೊರಬರಲು ಸ್ವಲ್ಪ ಸಮಯವೇ ಆಗಿತೆಂದು ನಾಯಕಾಗಿ ಆಯ್ಕೆಯಾಗಿ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾನು ಟೀಮ್ ಇಂಡಿಯಾವನ್ನು ಮುನ್ನಡೆಸುತ್ತೇವೆ ಎಂಬ ಅಂಶವನ್ನು ಜೀರ್ಣಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ರಿಷಬ್ ಪಂತ್ ಅವರು ಹೇಳಿಕೊಂಡಿದ್ದಾರೆ.

ನನಗೆ ಅದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಗಂಟೆಯ ಹಿಂದೆ ನನಗೆ ಗೊತ್ತಾಯಿತು ಎಂದು ರಿಷಬ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದು ತುಂಬಾ ಒಳ್ಳೆಯ ಭಾವನೆ, ಆದರೆ, ತುಂಬಾ ಒಳ್ಳೆಯ ಸಂದರ್ಭಗಳಲ್ಲಿ ಬಂದಿಲ್ಲ. ಆದರೂ, ಕೂಡ ಅದೇ ಸಮಯದಲ್ಲಿ ನನಗೆ ಸಂತೋಷವಾಗಿದೆ. ಭಾರತ ತಂಡವನ್ನು ಮುನ್ನಡೆಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಏರಿಳಿತದ ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು ಎಂದು ರಿಷಭ್ ಪಂತ್ ಅವರು ಹೇಳಿದ್ದಾರೆ.

ನಾಯಕನಾಗಿ, ಇದು ನನಗೆ ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ನೀವು ಮತ್ತೆ ಮತ್ತೆ ಅದೇ ಕೆಲಸವನ್ನು ಮಾಡುತ್ತಿರುವಾಗ ನೀವು ಸುಧಾರಿಸುತ್ತೀರಿ. ನಾನು ತಪ್ಪುಗಳಿಂದ ಕಲಿಯುತ್ತಲೇ ಇರುವ ವ್ಯಕ್ತಿ ಮತ್ತು ಮುಂದಿನ ದಿನಗಳಲ್ಲಿ ಅದು ನನಗೆ ಸಹಾಯಕ ಎಂದು ನಾನು ಭಾವಿಸುತ್ತೇನೆ ಅಂತ ತಮ್ಮ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...