Monday, August 10, 2026
Monday, August 10, 2026

ರಿಷಭ್ ಪಂತ್ ದ.ಆಫ್ರಿಕಾ ವಿರುದ್ಧ ಟಿ20 ಟೀಮ್ ಇಂಡಿಯಾ ನಾಯಕ

Date:

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ ಆರಂಭಕ್ಕೆ 24 ಗಂಟೆ ಬಾಕಿ ಇದೆ. ಟೀಂ ಇಂಡಿಯಾದಿಂದ ಹೊರಬಿದ್ದ ನಾಯಕ ಕೆ.ಎಲ್ ರಾಹುಲ್ ಬದಲಿಗೆ ರಿಷಭ್ ಪಂತ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಆದರೆ, ನಿನ್ನೆ ಬುಧವಾರ ಸಂಜೆ ಟೀಂ ಇಂಡಿಯಾ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಂತೆ ಪಂತ್ ನಾಯಕನಾಗಿ ಆಯ್ಕೆಯಾಗಿದ್ದರ ಕುರಿತು ಆಘಾತಗೊಂಡ ರಿಷಭ್, ಅದರಿಂದ ಹೊರಬರಲು ಸ್ವಲ್ಪ ಸಮಯವೇ ಆಗಿತೆಂದು ನಾಯಕಾಗಿ ಆಯ್ಕೆಯಾಗಿ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾನು ಟೀಮ್ ಇಂಡಿಯಾವನ್ನು ಮುನ್ನಡೆಸುತ್ತೇವೆ ಎಂಬ ಅಂಶವನ್ನು ಜೀರ್ಣಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ರಿಷಬ್ ಪಂತ್ ಅವರು ಹೇಳಿಕೊಂಡಿದ್ದಾರೆ.

ನನಗೆ ಅದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಗಂಟೆಯ ಹಿಂದೆ ನನಗೆ ಗೊತ್ತಾಯಿತು ಎಂದು ರಿಷಬ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದು ತುಂಬಾ ಒಳ್ಳೆಯ ಭಾವನೆ, ಆದರೆ, ತುಂಬಾ ಒಳ್ಳೆಯ ಸಂದರ್ಭಗಳಲ್ಲಿ ಬಂದಿಲ್ಲ. ಆದರೂ, ಕೂಡ ಅದೇ ಸಮಯದಲ್ಲಿ ನನಗೆ ಸಂತೋಷವಾಗಿದೆ. ಭಾರತ ತಂಡವನ್ನು ಮುನ್ನಡೆಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಏರಿಳಿತದ ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು ಎಂದು ರಿಷಭ್ ಪಂತ್ ಅವರು ಹೇಳಿದ್ದಾರೆ.

ನಾಯಕನಾಗಿ, ಇದು ನನಗೆ ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ನೀವು ಮತ್ತೆ ಮತ್ತೆ ಅದೇ ಕೆಲಸವನ್ನು ಮಾಡುತ್ತಿರುವಾಗ ನೀವು ಸುಧಾರಿಸುತ್ತೀರಿ. ನಾನು ತಪ್ಪುಗಳಿಂದ ಕಲಿಯುತ್ತಲೇ ಇರುವ ವ್ಯಕ್ತಿ ಮತ್ತು ಮುಂದಿನ ದಿನಗಳಲ್ಲಿ ಅದು ನನಗೆ ಸಹಾಯಕ ಎಂದು ನಾನು ಭಾವಿಸುತ್ತೇನೆ ಅಂತ ತಮ್ಮ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...