Wednesday, June 25, 2025
Wednesday, June 25, 2025

ರಿಷಭ್ ಪಂತ್ ದ.ಆಫ್ರಿಕಾ ವಿರುದ್ಧ ಟಿ20 ಟೀಮ್ ಇಂಡಿಯಾ ನಾಯಕ

Date:

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ ಆರಂಭಕ್ಕೆ 24 ಗಂಟೆ ಬಾಕಿ ಇದೆ. ಟೀಂ ಇಂಡಿಯಾದಿಂದ ಹೊರಬಿದ್ದ ನಾಯಕ ಕೆ.ಎಲ್ ರಾಹುಲ್ ಬದಲಿಗೆ ರಿಷಭ್ ಪಂತ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಆದರೆ, ನಿನ್ನೆ ಬುಧವಾರ ಸಂಜೆ ಟೀಂ ಇಂಡಿಯಾ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಂತೆ ಪಂತ್ ನಾಯಕನಾಗಿ ಆಯ್ಕೆಯಾಗಿದ್ದರ ಕುರಿತು ಆಘಾತಗೊಂಡ ರಿಷಭ್, ಅದರಿಂದ ಹೊರಬರಲು ಸ್ವಲ್ಪ ಸಮಯವೇ ಆಗಿತೆಂದು ನಾಯಕಾಗಿ ಆಯ್ಕೆಯಾಗಿ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾನು ಟೀಮ್ ಇಂಡಿಯಾವನ್ನು ಮುನ್ನಡೆಸುತ್ತೇವೆ ಎಂಬ ಅಂಶವನ್ನು ಜೀರ್ಣಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ರಿಷಬ್ ಪಂತ್ ಅವರು ಹೇಳಿಕೊಂಡಿದ್ದಾರೆ.

ನನಗೆ ಅದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಗಂಟೆಯ ಹಿಂದೆ ನನಗೆ ಗೊತ್ತಾಯಿತು ಎಂದು ರಿಷಬ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದು ತುಂಬಾ ಒಳ್ಳೆಯ ಭಾವನೆ, ಆದರೆ, ತುಂಬಾ ಒಳ್ಳೆಯ ಸಂದರ್ಭಗಳಲ್ಲಿ ಬಂದಿಲ್ಲ. ಆದರೂ, ಕೂಡ ಅದೇ ಸಮಯದಲ್ಲಿ ನನಗೆ ಸಂತೋಷವಾಗಿದೆ. ಭಾರತ ತಂಡವನ್ನು ಮುನ್ನಡೆಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಏರಿಳಿತದ ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು ಎಂದು ರಿಷಭ್ ಪಂತ್ ಅವರು ಹೇಳಿದ್ದಾರೆ.

ನಾಯಕನಾಗಿ, ಇದು ನನಗೆ ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ನೀವು ಮತ್ತೆ ಮತ್ತೆ ಅದೇ ಕೆಲಸವನ್ನು ಮಾಡುತ್ತಿರುವಾಗ ನೀವು ಸುಧಾರಿಸುತ್ತೀರಿ. ನಾನು ತಪ್ಪುಗಳಿಂದ ಕಲಿಯುತ್ತಲೇ ಇರುವ ವ್ಯಕ್ತಿ ಮತ್ತು ಮುಂದಿನ ದಿನಗಳಲ್ಲಿ ಅದು ನನಗೆ ಸಹಾಯಕ ಎಂದು ನಾನು ಭಾವಿಸುತ್ತೇನೆ ಅಂತ ತಮ್ಮ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...