Saturday, October 5, 2024
Saturday, October 5, 2024

ದಲಿತ ನಾಯಕ ಕೃಷ್ಣಪ್ಪನವರ ಚಿಂತನೆ ಮನನ ಈಗ ಮುಖ್ಯ- ಗುರುಮೂರ್ತಿ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ದಲಿತ ನೌಕರರ ಒಕ್ಕೂಟ ಶಿವಮೊಗ್ಗ ಇವರ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಪ್ರೋ.ಬಿ. ಕೃಷ್ಣಪ್ಪನವರ 85ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕರ್ನಾಟಕ ದಲಿತ ಸಂಘರ್ಷದ ರಾಜ್ಯ ಸಂಚಾಲಕರಾದ ಶ್ರೀ ಸಿ.ಎಂ. ಗುರುಮೂರ್ತಿಯವರು ಮಾತನಾಡಿ, ಶ್ರೀ ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ನಾವು ಆಚರಣೆ ಮಾಡುತ್ತಾ ಬಂದಿದ್ದೇವೆ. ಈ ನೆನಪು ನಮಗೆ ಅಗತ್ಯವಾಗಿದೆ. ಕೃಷ್ಣಪ್ಪನವರ ಚಿಂತನೆಗಳು, ಬದುಕು ಈಗಿನ ವರ್ತಮಾನಕ್ಕೆ, ಹಾಗೂ ಮುಂದಿನ ಭವಿಷ್ಯಕ್ಕೆ ಮಾರ್ಗ ಸೂಚಿಯಾಗಿವೆ ಎಂದರು.

ಇಂಥವರ ಹುಟ್ಟುಹಬ್ಬವನ್ನು ಕೇವಲ ಪುಷ್ಪನಮನ ಮಾಡುವ ಮೂಲಕ ಆಚರಿಸಿದೆ ಅವರ ಚಿಂತನೆಗಳನ್ನು ವಿಮರ್ಶಾತ್ಮಕವಾಗಿ ಮನನ ಮಾಡಿಕೊಳ್ಳುವುದು ಅತ್ಯಮೂಲ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೊಸತು ಪತ್ರಿಕೆಯ ಸಂಪಾದಕರಾದ ಸಿದ್ದನಗೌಡ ಪಾಟೀಲ್ , ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಕೆ.ಟಿ. ಗಂಗಾಧರ, ಖ್ಯಾತ ಸಾಹಿತಿ ಶ್ರೀ.ಬಿ. ಚಂದ್ರೇಗೌಡ, ಪ್ರೊ. ಎಂ.ಜಿ. ನಂಜುಂಡಸ್ವಾಮಿ, ಶಿವಮೊಗ್ಗದ ವಕೀಲರಾದ ಶ್ರೀಪಾಲ್, ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಎಸ್. ಹೊನ್ನಾಳಿ, ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಚಂದ್ರಹಾಸ ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...