Monday, December 8, 2025
Monday, December 8, 2025

ವಿಯಟ್ನಾಂ ಗೆ ಅತಿವೇಗದ ರಕ್ಷಣಾ ಹಡಗುಗಳ ಹಸ್ತಾಂತರ

Date:

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗ ₹770 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 12 ಅತಿ ವೇಗದ ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರ ಮಾಡಿದರು.

ದಕ್ಷಿಣ ಚೀನಾ ಸಮುದ್ರದ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯವನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಮತ್ತು ವಿಯೆಟ್ನಾಂ ದೇಶಗಳ ಭದ್ರತಾ ಸಹಕಾರದ ನಡುವೆ ನಡೆದ ಈ ಬೆಳವಣಿಗೆ ಮಹತ್ವ ಪಡೆದಿದೆ.

ಜೂನ್ 8 ರಿಂದ ವಿಯೆಟ್ನಾಂ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಹಾಂಗ್ ಹಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳನ್ನು ಸಾಲದ ರೂಪದ ಯೋಜನೆಯಡಿ ವಿಯೆಟ್ನಾಂಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಈ ಯೋಜನೆಯು ವಿಶ್ವಕ್ಕಾಗಿ ಭಾರತದಲ್ಲಿ ನಿರ್ಮಿಸಿ (ಮೇಕ್ ಇನ್ ಇಂಡಿಯಾ- ಮೇಕ್ ಫಾರ್ ದಿ ವರ್ಲ್ಡ್ ಮಿಷನ್) ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು.

ಭಾರತ ನೀಡಿದ ಸಾಲದ ಯೋಜನೆಯಡಿ 12 ಅತಿವೇಗದ ರಕ್ಷಣಾ ಹಡಗುಗಳ ನಿರ್ಮಾಣ ಯೋಜನೆ ಪೂರ್ಣಗೊಳಿಸಲಾಗಿದೆ. ಮೊದಲ 5 ಹಡಗುಗಳನ್ನು ಭಾರತದಲ್ಲಿ ಎಲ್‌ಅಂಡ್‌ಟಿ ಶಿಪ್‌ಯಾರ್ಡ್‌ನಲ್ಲಿ ನಿರ್ಮಿಸಲಾಗಿತ್ತು.

ಇದೀಗ ಉಳಿದ 7 ಹಡುಗಗಳನ್ನು ಹಾಂಗ್ ಹಾ ಶಿಪ್ ಯಾರ್ಡ್‌ನಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಉಭಯ ದೇಶಗಳ ನಡುವೆ ಹೆಚ್ಚಿನ ಭದ್ರತಾ ಸಹಕಾರ ಯೋಜನೆಗಳಿಗೆ ಪೂರಕವಾಗಲಿದೆ ಎಂಬ ಭರವಸೆಯಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...