Sunday, May 24, 2026
Sunday, May 24, 2026

ವಿಯಟ್ನಾಂ ಗೆ ಅತಿವೇಗದ ರಕ್ಷಣಾ ಹಡಗುಗಳ ಹಸ್ತಾಂತರ

Date:

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗ ₹770 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 12 ಅತಿ ವೇಗದ ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರ ಮಾಡಿದರು.

ದಕ್ಷಿಣ ಚೀನಾ ಸಮುದ್ರದ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯವನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಮತ್ತು ವಿಯೆಟ್ನಾಂ ದೇಶಗಳ ಭದ್ರತಾ ಸಹಕಾರದ ನಡುವೆ ನಡೆದ ಈ ಬೆಳವಣಿಗೆ ಮಹತ್ವ ಪಡೆದಿದೆ.

ಜೂನ್ 8 ರಿಂದ ವಿಯೆಟ್ನಾಂ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಹಾಂಗ್ ಹಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳನ್ನು ಸಾಲದ ರೂಪದ ಯೋಜನೆಯಡಿ ವಿಯೆಟ್ನಾಂಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಈ ಯೋಜನೆಯು ವಿಶ್ವಕ್ಕಾಗಿ ಭಾರತದಲ್ಲಿ ನಿರ್ಮಿಸಿ (ಮೇಕ್ ಇನ್ ಇಂಡಿಯಾ- ಮೇಕ್ ಫಾರ್ ದಿ ವರ್ಲ್ಡ್ ಮಿಷನ್) ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು.

ಭಾರತ ನೀಡಿದ ಸಾಲದ ಯೋಜನೆಯಡಿ 12 ಅತಿವೇಗದ ರಕ್ಷಣಾ ಹಡಗುಗಳ ನಿರ್ಮಾಣ ಯೋಜನೆ ಪೂರ್ಣಗೊಳಿಸಲಾಗಿದೆ. ಮೊದಲ 5 ಹಡಗುಗಳನ್ನು ಭಾರತದಲ್ಲಿ ಎಲ್‌ಅಂಡ್‌ಟಿ ಶಿಪ್‌ಯಾರ್ಡ್‌ನಲ್ಲಿ ನಿರ್ಮಿಸಲಾಗಿತ್ತು.

ಇದೀಗ ಉಳಿದ 7 ಹಡುಗಗಳನ್ನು ಹಾಂಗ್ ಹಾ ಶಿಪ್ ಯಾರ್ಡ್‌ನಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಉಭಯ ದೇಶಗಳ ನಡುವೆ ಹೆಚ್ಚಿನ ಭದ್ರತಾ ಸಹಕಾರ ಯೋಜನೆಗಳಿಗೆ ಪೂರಕವಾಗಲಿದೆ ಎಂಬ ಭರವಸೆಯಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...