Tuesday, August 25, 2026
Tuesday, August 25, 2026

ವಿಯಟ್ನಾಂ ಗೆ ಅತಿವೇಗದ ರಕ್ಷಣಾ ಹಡಗುಗಳ ಹಸ್ತಾಂತರ

Date:

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗ ₹770 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 12 ಅತಿ ವೇಗದ ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರ ಮಾಡಿದರು.

ದಕ್ಷಿಣ ಚೀನಾ ಸಮುದ್ರದ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯವನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಮತ್ತು ವಿಯೆಟ್ನಾಂ ದೇಶಗಳ ಭದ್ರತಾ ಸಹಕಾರದ ನಡುವೆ ನಡೆದ ಈ ಬೆಳವಣಿಗೆ ಮಹತ್ವ ಪಡೆದಿದೆ.

ಜೂನ್ 8 ರಿಂದ ವಿಯೆಟ್ನಾಂ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಹಾಂಗ್ ಹಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳನ್ನು ಸಾಲದ ರೂಪದ ಯೋಜನೆಯಡಿ ವಿಯೆಟ್ನಾಂಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಈ ಯೋಜನೆಯು ವಿಶ್ವಕ್ಕಾಗಿ ಭಾರತದಲ್ಲಿ ನಿರ್ಮಿಸಿ (ಮೇಕ್ ಇನ್ ಇಂಡಿಯಾ- ಮೇಕ್ ಫಾರ್ ದಿ ವರ್ಲ್ಡ್ ಮಿಷನ್) ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು.

ಭಾರತ ನೀಡಿದ ಸಾಲದ ಯೋಜನೆಯಡಿ 12 ಅತಿವೇಗದ ರಕ್ಷಣಾ ಹಡಗುಗಳ ನಿರ್ಮಾಣ ಯೋಜನೆ ಪೂರ್ಣಗೊಳಿಸಲಾಗಿದೆ. ಮೊದಲ 5 ಹಡಗುಗಳನ್ನು ಭಾರತದಲ್ಲಿ ಎಲ್‌ಅಂಡ್‌ಟಿ ಶಿಪ್‌ಯಾರ್ಡ್‌ನಲ್ಲಿ ನಿರ್ಮಿಸಲಾಗಿತ್ತು.

ಇದೀಗ ಉಳಿದ 7 ಹಡುಗಗಳನ್ನು ಹಾಂಗ್ ಹಾ ಶಿಪ್ ಯಾರ್ಡ್‌ನಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಉಭಯ ದೇಶಗಳ ನಡುವೆ ಹೆಚ್ಚಿನ ಭದ್ರತಾ ಸಹಕಾರ ಯೋಜನೆಗಳಿಗೆ ಪೂರಕವಾಗಲಿದೆ ಎಂಬ ಭರವಸೆಯಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...