Tuesday, December 9, 2025
Tuesday, December 9, 2025

ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ತೆಗೆದು ವಿದ್ಯಾರ್ಥಿನಿಯರು ಹಾಜರು

Date:

ಮಂಗಳೂರಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣಗಳು ಕಾಣುತ್ತಿದೆ. ತಮ್ಮ ಪಟ್ಟು ಸಡಿಲಿಸಿ ಕಾಲೇಜಿನ ಸುಮಾರು 46 ವಿದ್ಯಾರ್ಥಿನಿಯರು ಹಿಜಾಬ್ ಕಳಚಿಟ್ಟು ತರಗತಿಗಳಿಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟು 101 ಮುಸ್ಲಿಂ ವಿದ್ಯಾರ್ಥಿನಿಯರು ಇರುವ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜು ಇದಾಗಿದ್ದು, ಕಳೆದ ಒಂದು ವಾರದಿಂದ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಈ ವಿವಾದ ರಾಜ್ಯಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನ ಆರು ಮಂದಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ನಮಗೆ ಹಿಜಾಬ್‌ ಬೇಕು ಎಂದು ಹಠ ಹಿಡಿದರು. ಕೊನೆಗೆ ಕಾಲೇಜಿ ಮಂಡಳಿ ಈ ಆರು ವಿದ್ಯಾರ್ಥಿನಿಯರನ್ನು 6 ದಿನಗಳ ಕಾಲ ಅಮಾನತು ಮಾಡಿತ್ತು.

ರಾಜ್ಯದಲ್ಲಿ ಹಿಜಾಬ್ ವಿವಾದ ತಣ್ಣಗಾಗಿದ್ದ ಸಂದರ್ಭದಲ್ಲಿ ಮಂಗಳೂರಿನ ಶ್ವವಿದ್ಯಾಲಯ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ತೊಡುತ್ತೇವೆ. ವಿಶ್ವವಿದ್ಯಾಲಯದಲ್ಲಿ ನಿಯಮದಲ್ಲಿ ಹಿಜಾಬ್ ತೊಡಲು ಅವಕಾಶ ಇದೆ ಎಂದು ಹೇಳಿ ಮೊದಲು ಹಿಜಾಬ್‌ ವಿವಾದ ಪುನಾರಂಭ ಮಾಡಿದ್ದರು.

ಇದೀಗ ಆರೂ ವಿದ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾಳಿಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟು ಗುರುವಾರದಿಂದ ಕಾಲೇಜಿಗೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...