Tuesday, August 25, 2026
Tuesday, August 25, 2026

ಸ್ಮಶಾನಕ್ಕೆ ಸೂಕ್ತಜಾಗ ನೀಡದ ಸರ್ಕಾರದ ಬಗ್ಗೆ ಕೋರ್ಟ್ ಚಾಟಿ

Date:

ಸ್ಮಶಾನ ಜಾಗದ ಕೊರತೆ ನೀಗಿಸುವ ನಿಟ್ಟಿನಲ್ಲಿ ಕೋರ್ಟ್ ಆದೇಶ ಪಾಲನೆ ಮಾಡದ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಹೈಕೋರ್ಟ್, ಹೆಣಗಳನ್ನು ರಸ್ತೆಯಲ್ಲಿ ಹೂಳಬೇಕೆ? ನಾಚಿಕೆಯಿಲ್ಲದ ಭಂಡಗೆಟ್ಟ ಸರ್ಕಾರಕ್ಕೆ ಬುದ್ದಿಕಲಿಸಬೇಕು ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರಿನ ಮಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಾಗ ನ್ಯಾಯಪೀಠ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಇದಲ್ಲದೆ, ಹೆಣಗಳನ್ನು ರಸ್ತೆಗಳಲ್ಲಿ ಹೂಳಬೇಕಾ ಎಂದು ಪ್ರಶ್ನಿಸಿದೆ. ಸ್ಮಶಾನವಿಲ್ಲದ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವ ಕುರಿತ 15 ದಿನಗಳಲ್ಲಿ ಕೋರ್ಟ್ ಆದೇಶ ಪೂರ್ಣ ಪ್ರಮಾಣದಲ್ಲಿ ಪಾಲಿಸದಿದ್ದರೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಿ ಜೈಲಿಗೆ ಕಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...