Friday, October 4, 2024
Friday, October 4, 2024

ಜೆಡಿಎಸ್ ಶಾಸಕರಿಂದ ಅಡ್ಡಮತದಾನ ಸ್ಪಷ್ಟ

Date:

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್‍ಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಡ್ಡ ಮತದಾನ ನಡೆಯಬಹುದೆಂಬ ಅನುಮಾನಕ್ಕೆ ಶ್ರೀನಿವಾಸ್ ಗೌಡ ಅವರೇ ಮುನ್ನುಡಿ ಬರೆದಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಅವರು ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಹಕ್ಕು ಚಲಾಯಿಸಿರುವುದನ್ನು ಶ್ರೀನಿವಾಸ್ ಗೌಡ ಅವರೇ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದರು. ಈ ದಿಢೀರ್ ಬೆಳವಣಿಗೆಯಿಂದಾಗಿ ಜೆಡಿಎಸ್‍ನ ಒಟ್ಟು 32 ಮತಗಳ ಪೈಕಿ 1 ಮತ ಕೈ ಕೊಟ್ಟಿರುವುದು ಸಾಬೀತಾಗಿದೆ. ಕೆಲ ತಿಂಗಳಿಂದ ಶ್ರೀನಿವಾಸ್ ಗೌಡ ಅವರು ಜೆಡಿಎಸ್ ಜೊತೆ ಸಂಬಂಧ ಅಷ್ಟಕಷ್ಟೇ ಎಂಬಂತಿತ್ತು.

ಶಾಸನಸಭೆಯಲ್ಲಿ ನಡೆಯುವ ಮತದಾನದ ವೇಳೆ ಮಾತ್ರ ಇದು ಅನ್ವಯವಾಗುತ್ತದೆ. ಶಾಸನಸಭೆಯಿಂದ ಆಚೆ ನಡೆಯುವ ಯಾವುದೇ ಚುನಾವಣೆಗೂ ಕಾಯ್ದೆಯನ್ನು ಶಾಸಕರ ಮೇಲೆ ಪ್ರಯೋಗಿಸಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಪಕ್ಷದ ಹಿರಿಯರಾದ ನನ್ನನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಹೀಗಾಗಿ ನಾನು ಜೆಡಿಎಸ್‍ಗೆ ಗುಡ್ ಬೈ ಹೇಳುತ್ತೇನೆ ಎಂದು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ಶಾಸಕ ರಮೇಶ್‍ಕುಮಾರ್ ಅವರು ಶ್ರೀನಿವಾಸ್ ಗೌಡ ಅವರನ್ನು ಭೇಟಿಯಾಗಿ ಗೌಪ್ಯವಾಗಿ ಮಾತುಕತೆ ನಡೆಸಿದರು.

ಇದು ಫಲಪ್ರದವಾಗಿದ್ದರಿಂದಲೇ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...